ನವದೆಹಲಿ : ಭಾರತ ಹಾಗೂ ಅಮೆರಿಕದ ನಡುವೆ ಮಹತ್ತರವಾದ ರಕ್ಷಣಾ ಒಪ್ಪಂದಗಳಾಗಿವೆ.
ಎರಡೂ ರಾಷ್ಟ್ರಗಳ ನಡುವೆ ಮಿಲಿಟರಿ ತಂತ್ರಜ್ಞಾನ, ವರ್ಗೀಕೃತ ಉಪಗ್ರಹ ದತ್ತಾಂಶ ಹಾಗೂ ಸೂಕ್ಷ್ಮ ಮಾಹಿತಿಗಳ ವಿನಿಮಯದ ಕುರಿತು 2+2 ಮಾತುಕತೆ ನಡೆದಿವೆ.

ದ್ವಿಪಕ್ಷೀಯ ರಕ್ಷಣಾ ಮತ್ತು ಮಿಲಿಟರಿ ಸಂಬಂಧಗಳನ್ನು ವೃದ್ಧಿಸಿಕೊಳ್ಳಲು ಇಂದಿನ ಮಾತುಕತೆ ವೇಳೆ ಒಪ್ಪಂದಕ್ಕೆ ಬರಲಾಗಿದೆ. ಪೂರ್ವ ಲಡಾಕ್ ನಲ್ಲಿ ಚೀನಾ ಜೊತೆಗೆ ಸೇನೆ ನಿಯೋಜನೆ ಸಂಘರ್ಷದ ನಡುವೆ ಅಮೆರಿಕ ಜೊತೆಗೆ ಭಾರತದ ರಕ್ಷಣಾ ಮತ್ತು ಮಿಲಿಟರಿ ಮಾತುಕತೆ ಮಹತ್ವ ಪಡೆದಿದೆ. ಇದು ಚೀನಾಕ್ಕೆ ಪರೋಕ್ಷವಾಗಿ ಎಚ್ಚರಿಕೆಯ ಗಂಟೆಯಾಗಿದೆ.

ಈ ಮಾತುಕತೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಅಮೆರಿಕಾದ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಮತ್ತು ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಇದ್ದರು.

ಆ ನಂತರ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎರಡು ದೇಶಗಳ ನಡುವೆ ಮಿಲಿಟರಿಯ ಸಂಬಂಧ ಹಾಗೂ ಸಹಕಾರ ವೃದ್ಧಿಯಾಗುತ್ತಿದೆ. ಎರಡು ದಿನಗಳ ಸಭೆಯಲ್ಲಿ, ಮೂರನೇ ನೆರೆ ರಾಷ್ಟ್ರಗಳೊಂದಿಗೆ ಅಥವಾ ಬೇರೆ ದೇಶಗಳ ಮುಂದೆ ನಮ್ಮ ಜಂಟಿ ಸಹಕಾರ ಚಟುವಟಿಕೆಗಳು ಮತ್ತು ಇತರ ಸಾಮರ್ಥ್ಯಗಳ ಹೆಚ್ಚಿಸುವಿಕೆಗೆ ಇರುವ ಸಾಧ್ಯತೆಗಳ ಕುರಿತು ಚರ್ಚಿಸಿದೆವು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಗ್ರರಿಂದ ಬಿಜೆಪಿ ನಾಯಕ ವಾಸೀಂ ಹತ್ಯೆ: ತಂದೆ, ಸಹೋದರನೂ ಬಲಿ

ಶ್ರೀನಗರ: ಬುಧವಾರ ರಾತ್ರಿ 9ಕ್ಕೆ ಜಮ್ಮು-ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸೀಂ ಬಾರಿ, ಆತನ ತಂದೆ…

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…

ಮಹಾರಾಷ್ಟ್ರದಲ್ಲಿ ಕರ್ಫ್ಯೂ ಜಾರಿ

ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು, ಇದೀಗ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು!

ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ.