ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ. 21 ವರ್ಷದ ನಿಖಿತಾ ಎಂಬ ಯುವತಿ, ತನ್ನ ಸ್ನೇಹಿತೆಯೊಂದಿಗೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ವಿದ್ಯಾರ್ಥಿನಿ ಅಗರ್‌ ವಾಲ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದಳು.

ಆದರೆ, ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಜನ ಸಂದಣಿಯ ಪ್ರದೇಶದಲ್ಲಿಯೇ ಗುಂಡಿನ ದಾಳಿ ನಡೆದಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿವೆ.
ಮೂಲಗಳಂತೆ ಯುವತಿಯನ್ನು ಕಿಡ್ನ್ಯಾಪ್ ಮಾಡಲು ಪಾಪಿಗಳು ಪ್ಲಾನ್ ಮಾಡಿದ್ದರು. ಹೀಗಾಗಿ ಅವಳನ್ನು ಕಾರಿನಲ್ಲಿ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಯುವತಿ ತಪ್ಪಿಸಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಪಾಪಿಗಳು, ಗುಂಡು ಹಾರಿಸಿದ್ದಾರೆ.

ಆರೋಪಿಗಳ ಪೈಕಿ ಓರ್ವನನ್ನು ಸೊಹ್ನಾ ಮೂಲದ ತೌಸಿಫ್‌ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಈ ಹಿಂದೆ ಯುವತಿಗೆ ಕಿರುಕುಳ ನೀಡಿದ್ದ. ಈ ಕುರಿತು ದೂರು ಕೂಡ ದಾಖಲಾಗಿದ್ದು, ರಾಜಿಯ ನಂತರ ಪ್ರಕರಣ ಹಿಂಪಡೆಯಲಾಗಿತ್ತು ಎಂದು ಬಲ್ಲಾಬ್‌ ಗರ್ ಎಸಿಪಿ ಜೈವೀರ್ ರಥಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8697…

ಕೊರೋನಾ ನಂತರ ಚೀನಾದಲ್ಲೀಗ ಬ್ಯುಬೊನಿಕ್ ಪ್ಲೇಗ್!

ನವದೆಹಲಿ: ಕೊರೊನಾದಿಂದ ಹೆಚ್ಚು ಬಾಧಿತ ನಂಬರ್ 1 ದೇಶ ಎನಿಸಿದ್ದ ಚೀನಾ ನಂತರದಲ್ಲಿ ಸಾಕಷ್ಟು ಚೇತರಿಸಿಕೊಂಡು…

ಮೋದಿ ಗೇಲಿ ಮಾಡಲು ಹೋಗಿ ಬೇಸ್ತು ಬಿದ್ದ ರಾಹುಲ್

ದೆಹಲಿ: ಚೀನಾ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಡುವೆ ಭಾರೀ ಕಂದಕ ಏರ್ಪಟ್ಟಿದೆ.…

ಸಂಸಾರದಲ್ಲಿ ಮೊಸರು ತಂದಿಟ್ಟ ಜಗಳ – ಪತಿಗೆ ಬರೋಬ್ಬರಿ 8 ವರ್ಷಗಳ ಶಿಕ್ಷೆ!

ಮುಂಬಯಿ : ಮೊಸರಿನಿಂದಾಗಿ ಶುರುವಾದ ಜಗಳದಲ್ಲಿ ಪತ್ನಿಯ ಕೊಂದ ಪತಿಗೆ ನ್ಯಾಯಾಲಯ 8 ವರ್ಷಗಳ ಶಿಕ್ಷೆ ವಿಧಿಸಿದೆ.