ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಈ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ. 21 ವರ್ಷದ ನಿಖಿತಾ ಎಂಬ ಯುವತಿ, ತನ್ನ ಸ್ನೇಹಿತೆಯೊಂದಿಗೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ವಿದ್ಯಾರ್ಥಿನಿ ಅಗರ್‌ ವಾಲ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದಳು.

ಆದರೆ, ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಜನ ಸಂದಣಿಯ ಪ್ರದೇಶದಲ್ಲಿಯೇ ಗುಂಡಿನ ದಾಳಿ ನಡೆದಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿವೆ.
ಮೂಲಗಳಂತೆ ಯುವತಿಯನ್ನು ಕಿಡ್ನ್ಯಾಪ್ ಮಾಡಲು ಪಾಪಿಗಳು ಪ್ಲಾನ್ ಮಾಡಿದ್ದರು. ಹೀಗಾಗಿ ಅವಳನ್ನು ಕಾರಿನಲ್ಲಿ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಯುವತಿ ತಪ್ಪಿಸಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಪಾಪಿಗಳು, ಗುಂಡು ಹಾರಿಸಿದ್ದಾರೆ.

ಆರೋಪಿಗಳ ಪೈಕಿ ಓರ್ವನನ್ನು ಸೊಹ್ನಾ ಮೂಲದ ತೌಸಿಫ್‌ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಈ ಹಿಂದೆ ಯುವತಿಗೆ ಕಿರುಕುಳ ನೀಡಿದ್ದ. ಈ ಕುರಿತು ದೂರು ಕೂಡ ದಾಖಲಾಗಿದ್ದು, ರಾಜಿಯ ನಂತರ ಪ್ರಕರಣ ಹಿಂಪಡೆಯಲಾಗಿತ್ತು ಎಂದು ಬಲ್ಲಾಬ್‌ ಗರ್ ಎಸಿಪಿ ಜೈವೀರ್ ರಥಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋರೊನಾ: 30-40 ವಯಸ್ಸಿನವರ ಸಾವಿನ ಪ್ರಮಾಣ

ನವದೆಹಲಿ: 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಅದರಲ್ಲೂ 60 ದಾಟಿದವರಿಗೆ ಕೋರೊನಾ ಸೋಂಕು ತಗುಲಿದರೆ ಮರಣ ಹೊಂದುವ…

ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಸುಳ್ಳು ಹೇಳಿದ್ದು ಭಾರತವೋ ಅಥವಾ ಡೊನಾಲ್ಡ್ ಟ್ರಂಪೋ?

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತಾಡಿದ್ದೇನೆ. ಅವರು ಒಳ್ಳೆಯ ಮನಃಸ್ಥಿತಿಯಲ್ಲಿಲ್ಲ ಎಂದು ಅಮೆರಿಕ…

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.