ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ. 21 ವರ್ಷದ ನಿಖಿತಾ ಎಂಬ ಯುವತಿ, ತನ್ನ ಸ್ನೇಹಿತೆಯೊಂದಿಗೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ವಿದ್ಯಾರ್ಥಿನಿ ಅಗರ್ ವಾಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದಳು.
ಆದರೆ, ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಜನ ಸಂದಣಿಯ ಪ್ರದೇಶದಲ್ಲಿಯೇ ಗುಂಡಿನ ದಾಳಿ ನಡೆದಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿವೆ.
ಮೂಲಗಳಂತೆ ಯುವತಿಯನ್ನು ಕಿಡ್ನ್ಯಾಪ್ ಮಾಡಲು ಪಾಪಿಗಳು ಪ್ಲಾನ್ ಮಾಡಿದ್ದರು. ಹೀಗಾಗಿ ಅವಳನ್ನು ಕಾರಿನಲ್ಲಿ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಯುವತಿ ತಪ್ಪಿಸಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಪಾಪಿಗಳು, ಗುಂಡು ಹಾರಿಸಿದ್ದಾರೆ.
ಆರೋಪಿಗಳ ಪೈಕಿ ಓರ್ವನನ್ನು ಸೊಹ್ನಾ ಮೂಲದ ತೌಸಿಫ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಈ ಹಿಂದೆ ಯುವತಿಗೆ ಕಿರುಕುಳ ನೀಡಿದ್ದ. ಈ ಕುರಿತು ದೂರು ಕೂಡ ದಾಖಲಾಗಿದ್ದು, ರಾಜಿಯ ನಂತರ ಪ್ರಕರಣ ಹಿಂಪಡೆಯಲಾಗಿತ್ತು ಎಂದು ಬಲ್ಲಾಬ್ ಗರ್ ಎಸಿಪಿ ಜೈವೀರ್ ರಥಿ ತಿಳಿಸಿದ್ದಾರೆ.