ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 9ಕ್ಕೆ ಸುಮಾರಿಗೆ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಜಯಪ್ರಕಾಶ್ ಅವರ ಪತ್ನಿ ವಿನೋದಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕೆ.ಆರ್. ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ವಿನೋದಾ ಅವರನ್ನು ಕೂಡಲೇ ಕುಟುಂಬಸ್ಥರು ಭಟ್ಟರಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿನೋದಾ ಅವರು ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಷನ್ ಗೆ ಒಳಗಾಗಿದ್ದರು. ದಂಪತಿಗೆ ಮೂರು ವರ್ಷದ ಮಗುವಿದ್ದು, ಮಾಜಿ ಕಾರ್ಪೋರೇಟರ್ ಆಗಿರುವ ಜಯಪ್ರಕಾಶ್ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಆಪ್ತರಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಕೊರೋನಾ ಸಂಕಷ್ಟ: ಜನರ ನೋವಿಗೆ ಧ್ವನಿಗುತ್ತಿರುವ ಶಿವಕುಮಾರಗೌಡ

ಈಗಾಗಲೇ ಒಂದುವರೆ ತಿಂಗಳ ಲಾಕ್ ಡೌನ್ ನಿಂದಾಗಿ ಬಹುತೇಕ ಬಡ ಹಾಗೂ ಮದ್ಯಮ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇದರಿಂದಾಗಿ ಸಾಕಷ್ಟು ಜನ ತಮ್ಮದೇ ಆದ ರೀತಿಯಲ್ಲಿ ಜನ ಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಡರಗಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಜನರ ಸಂಕಷ್ಟಕ್ಕೆ ಧ್ವನಿಯಾಗಿದ್ದಾರೆ.

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.