ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 9ಕ್ಕೆ ಸುಮಾರಿಗೆ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಜಯಪ್ರಕಾಶ್ ಅವರ ಪತ್ನಿ ವಿನೋದಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕೆ.ಆರ್. ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ವಿನೋದಾ ಅವರನ್ನು ಕೂಡಲೇ ಕುಟುಂಬಸ್ಥರು ಭಟ್ಟರಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿನೋದಾ ಅವರು ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಷನ್ ಗೆ ಒಳಗಾಗಿದ್ದರು. ದಂಪತಿಗೆ ಮೂರು ವರ್ಷದ ಮಗುವಿದ್ದು, ಮಾಜಿ ಕಾರ್ಪೋರೇಟರ್ ಆಗಿರುವ ಜಯಪ್ರಕಾಶ್ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಆಪ್ತರಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…

ಸಂಶಯದ ಆಸಾಮಿಯಿಂದ ಪತ್ನಿ, ಮಗನಿಗೆ ಚಾಕು ಇರಿತ

ಉತ್ತರಪ್ರಭ ಸುದ್ದಿ ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ…

ಶಿರಹಟ್ಟಿ ತಾಪಂ ಸಾಮಾನ್ಯ ಸಭೆ: ಹನ್ನೊಂದ್ ತಿಂಗಳದಿಂದ ಪಗಾರ ಇಲ್ಲಂದ್ರ ಹೊಟ್ಟೆಗೇನ್ ಹಿಟ್ಟ್ ತಿನಬೇಕೇನ್ರಿ? ತಾಪಂ ಸದಸ್ಯರ ಆಕ್ರೋಶ!

ಶಿರಹಟ್ಟಿ: ಹನ್ನೊಂದು ತಿಂಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ರೂಪಾಯಿ ಸಂಬಳ…