ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಕಟ್ಟಿದ ಪಕ್ಷದಲ್ಲಿ ಅವರು ಎಲ್ಲಿದ್ದಾರೆ ಎಂದು ಬೂತ ಕನ್ನಡಿ ಹಾಕಿ ಹುಡುಕಾಡುವ ಕಾಲ ಬಂದಿದೆ. ಅಲ್ಲದೇ, ರಾಜ್ಯದಲ್ಲಿ ಯಡಿಯೂರಪ್ಪ ಅವರು ಕಟ್ಟಿದ ಬಿಜೆಪಿ ಪಕ್ಷದಲ್ಲಿ ಅವರನ್ನೇ ಹೊರ ಹಾಕುವ ಹುನ್ನಾರ ನಡೆದಿದೆ. ಯಡಿಯೂರಪ್ಪ ಅವರನ್ನೇ ಓಡಿಸಿ, ಆ ನಂತರ ಸೋತು ಸುಣ್ಣವಾಗಿ ಮತ್ತೆ ಯಡಿಯೂರಪ್ಪ ಅವರನ್ನು ಈ ಪಕ್ಷದವರು ಕರೆ ತಂದಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಪಕ್ಷ ಬೆಳೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಸಾಕಷ್ಟು ನಾಯಕರು ಶ್ರಮಿಸಿದ್ದಾರೆ. ಎಲ್ಲರಿಗಿಂತಲೂ ಹೆಚ್ಚಾಗಿ ಪಕ್ಷ ಬೆಳೆಸಿದ್ದರ ವಿಷಯ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಮಾಹಿತಿ ಕೊರತೆ ಇದ್ದವರು ಅವರನ್ನೇ ಕೇಳಿ ತಿಳಿದುಕೊಳ್ಳಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಹಣಕಾಸು ನಿರ್ವಹಣೆಯಲ್ಲಿ ನಿಪುಣರಾಗಿದ್ದಾರೆ. ಅವರು ಮಾಡಿದ ಜನಪರ ಆಡಳಿತ ಹಾಗೂ ಮಾಡಿರುವ ಕೆಲಸಗಳನ್ನು ಮಾಡುವುದಿರಲಿ, ಊಹಿಸಲೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತ್ತಿಚೆಗೆ ಟ್ವೀಟ್ ಮಾಡಿದ್ದ ಬಿಜೆಪಿ, ದೇವೇಗೌಡರು ಬೆಳೆಸಿದ ಜೆಡಿಎಸ್ನಲ್ಲಿ ಸ್ಥಾನಮಾನ ಅನುಭವಿಸಿದಿರಿ. ಪರಮೇಶ್ವರ್ ಅವರು ಬೆಳೆಸಿದ ಕಾಂಗ್ರೆಸ್ ನಲ್ಲಿ ಸಿಎಂ ಆದಿರಿ. ಡಿಕೆಶಿ ಕಟ್ಟುತ್ತಿರುವ ಪಕ್ಷದಲ್ಲಿ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದೀರಿ, ಕಾಗೆ ಕಟ್ಟಿದ ಗೂಡಿನಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಏಕೆ? ಮಾನ್ಯ ಸಿದ್ದರಾಮಯ್ಯ ಅವರೇ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

Leave a Reply

Your email address will not be published. Required fields are marked *

You May Also Like

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.

3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ

ವದೆಹಲಿ: ದೇಶದ ಕೆಲ ಭಾಗಗಳಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು.

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.

ಜಿಲೆಟಿನ್‌ ಸ್ಫೋಟ ದುರಂತ: ಗ್ರಾಮಸ್ಥರಿಂದ ಆಕ್ರೋಶ

ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್‌ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ.