ಬಿಜೆಪಿಯಲ್ಲಿ ನಡೆಯುತ್ತಿದೆಯಂತೆ ಯಡಿಯೂರಪ್ಪ ಅವರನ್ನು ಹೊರ ಹಾಕುವ ಹುನ್ನಾರ?

Siddaramayya ex cm

ಬಿಜೆಪಿಯವರ ತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಕಟ್ಟಿದ ಪಕ್ಷದಲ್ಲಿ ಅವರು ಎಲ್ಲಿದ್ದಾರೆ ಎಂದು ಬೂತ ಕನ್ನಡಿ ಹಾಕಿ ಹುಡುಕಾಡುವ ಕಾಲ ಬಂದಿದೆ. ಅಲ್ಲದೇ, ರಾಜ್ಯದಲ್ಲಿ ಯಡಿಯೂರಪ್ಪ ಅವರು ಕಟ್ಟಿದ ಬಿಜೆಪಿ ಪಕ್ಷದಲ್ಲಿ ಅವರನ್ನೇ ಹೊರ ಹಾಕುವ ಹುನ್ನಾರ ನಡೆದಿದೆ. ಯಡಿಯೂರಪ್ಪ ಅವರನ್ನೇ ಓಡಿಸಿ, ಆ ನಂತರ ಸೋತು ಸುಣ್ಣವಾಗಿ ಮತ್ತೆ ಯಡಿಯೂರಪ್ಪ ಅವರನ್ನು ಈ ಪಕ್ಷದವರು ಕರೆ ತಂದಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಪಕ್ಷ ಬೆಳೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಸಾಕಷ್ಟು ನಾಯಕರು ಶ್ರಮಿಸಿದ್ದಾರೆ. ಎಲ್ಲರಿಗಿಂತಲೂ ಹೆಚ್ಚಾಗಿ ಪಕ್ಷ ಬೆಳೆಸಿದ್ದರ ವಿಷಯ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಮಾಹಿತಿ ಕೊರತೆ ಇದ್ದವರು ಅವರನ್ನೇ ಕೇಳಿ ತಿಳಿದುಕೊಳ್ಳಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಹಣಕಾಸು ನಿರ್ವಹಣೆಯಲ್ಲಿ ನಿಪುಣರಾಗಿದ್ದಾರೆ. ಅವರು ಮಾಡಿದ ಜನಪರ ಆಡಳಿತ ಹಾಗೂ ಮಾಡಿರುವ ಕೆಲಸಗಳನ್ನು ಮಾಡುವುದಿರಲಿ, ಊಹಿಸಲೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತ್ತಿಚೆಗೆ ಟ್ವೀಟ್ ಮಾಡಿದ್ದ ಬಿಜೆಪಿ, ದೇವೇಗೌಡರು ಬೆಳೆಸಿದ ಜೆಡಿಎಸ್ನಲ್ಲಿ ಸ್ಥಾನಮಾನ ಅನುಭವಿಸಿದಿರಿ. ಪರಮೇಶ್ವರ್ ಅವರು ಬೆಳೆಸಿದ ಕಾಂಗ್ರೆಸ್ ನಲ್ಲಿ ಸಿಎಂ ಆದಿರಿ. ಡಿಕೆಶಿ ಕಟ್ಟುತ್ತಿರುವ ಪಕ್ಷದಲ್ಲಿ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದೀರಿ, ಕಾಗೆ ಕಟ್ಟಿದ ಗೂಡಿನಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಏಕೆ? ಮಾನ್ಯ ಸಿದ್ದರಾಮಯ್ಯ ಅವರೇ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

Exit mobile version