ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಕಟ್ಟಿದ ಪಕ್ಷದಲ್ಲಿ ಅವರು ಎಲ್ಲಿದ್ದಾರೆ ಎಂದು ಬೂತ ಕನ್ನಡಿ ಹಾಕಿ ಹುಡುಕಾಡುವ ಕಾಲ ಬಂದಿದೆ. ಅಲ್ಲದೇ, ರಾಜ್ಯದಲ್ಲಿ ಯಡಿಯೂರಪ್ಪ ಅವರು ಕಟ್ಟಿದ ಬಿಜೆಪಿ ಪಕ್ಷದಲ್ಲಿ ಅವರನ್ನೇ ಹೊರ ಹಾಕುವ ಹುನ್ನಾರ ನಡೆದಿದೆ. ಯಡಿಯೂರಪ್ಪ ಅವರನ್ನೇ ಓಡಿಸಿ, ಆ ನಂತರ ಸೋತು ಸುಣ್ಣವಾಗಿ ಮತ್ತೆ ಯಡಿಯೂರಪ್ಪ ಅವರನ್ನು ಈ ಪಕ್ಷದವರು ಕರೆ ತಂದಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಪಕ್ಷ ಬೆಳೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಸಾಕಷ್ಟು ನಾಯಕರು ಶ್ರಮಿಸಿದ್ದಾರೆ. ಎಲ್ಲರಿಗಿಂತಲೂ ಹೆಚ್ಚಾಗಿ ಪಕ್ಷ ಬೆಳೆಸಿದ್ದರ ವಿಷಯ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಮಾಹಿತಿ ಕೊರತೆ ಇದ್ದವರು ಅವರನ್ನೇ ಕೇಳಿ ತಿಳಿದುಕೊಳ್ಳಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಹಣಕಾಸು ನಿರ್ವಹಣೆಯಲ್ಲಿ ನಿಪುಣರಾಗಿದ್ದಾರೆ. ಅವರು ಮಾಡಿದ ಜನಪರ ಆಡಳಿತ ಹಾಗೂ ಮಾಡಿರುವ ಕೆಲಸಗಳನ್ನು ಮಾಡುವುದಿರಲಿ, ಊಹಿಸಲೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತ್ತಿಚೆಗೆ ಟ್ವೀಟ್ ಮಾಡಿದ್ದ ಬಿಜೆಪಿ, ದೇವೇಗೌಡರು ಬೆಳೆಸಿದ ಜೆಡಿಎಸ್ನಲ್ಲಿ ಸ್ಥಾನಮಾನ ಅನುಭವಿಸಿದಿರಿ. ಪರಮೇಶ್ವರ್ ಅವರು ಬೆಳೆಸಿದ ಕಾಂಗ್ರೆಸ್ ನಲ್ಲಿ ಸಿಎಂ ಆದಿರಿ. ಡಿಕೆಶಿ ಕಟ್ಟುತ್ತಿರುವ ಪಕ್ಷದಲ್ಲಿ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದೀರಿ, ಕಾಗೆ ಕಟ್ಟಿದ ಗೂಡಿನಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಏಕೆ? ಮಾನ್ಯ ಸಿದ್ದರಾಮಯ್ಯ ಅವರೇ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

Leave a Reply

Your email address will not be published. Required fields are marked *

You May Also Like

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.

ಮಲಗಿದೆ ರಾಜ್ಯ ಮಾಹಿತಿ ಹಕ್ಕು ವೆಬ್ ಸೈಟ್!: ಮಾಹಿತಿ ಮುಚ್ಚಿಡುವ ಯತ್ನದ ಆರೋಪ

ಜನರಿಗೆ ಮಾಹಿತಿ ಒದಗಿಸಲೆಂದೇ ಮಾಹಿತಿ ಹಕ್ಕು ಜಾರಿಗೆ ಬಂದಿದೆ. ಆದರೆ, ಜನರು ಬಯಸುವ ಮಾಹಿತಿ ನೀಡಲು ಮಾಹಿತಿ ಹಕ್ಕು ಆಯೋಗ ಹಿಂದೇಟು ಹಾಕುತ್ತಿದೆಯೇ ಎಂಬ ಸಂದೇಹ ಬರುವಂತಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದ ಮಾಹಿತಿ ಹಕ್ಕು ಅಂತರ್ಜಾಲ ತಾಣ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅರ್ಜಿ ಹಾಕಲು ಬಯಸುವವರು ನಿರಾಶರಾಗಿ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.

ಲಾಕ್‌ಡೌನ್ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುತ್ತದೆ: ಸಚಿವ ಬೊಮ್ಮಾಯಿ

ಈಗಾಗಲೇ ದಿನದಿಂದ ದಿನಕ್ಕೆ ಕೊರೋನ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.