ಮೈಸೂರು : ಎರಡು ತಲೆ ಹಾವಿನೊಂದಿಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಯ್ಯ, ಹೇಮಂತ್, ಯೋಗೇಶ್, ರವಿ ಮತ್ತು ಭರಮಗೌಡ ಬಂಧಿತ ಆರೋಪಿಗಳು. ಅರಣ್ಯ ಅಧಿಕಾರಿಗಳು ಶುಕ್ರವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವನ್ನು ಕಾರಿನಲ್ಲಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಇಲಾಖೆ ಸಿಬ್ಬಂದಿ, ಸಿದ್ದಲಿಂಗಪುರ ಬಳಿ ಕಾರನ್ನು ತಡೆದು ಸರೀಸೃಪ ವಶಪಡಿಸಿಕೊಂಡಿದ್ದಾಗಿ ಡಿಸಿಎಫ್ ಪೂವಯ್ಯ ಹೇಳಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ಸಾಗಾಣಿಕೆ ಮಾಡುತ್ತಿದ್ದ ಮಣ್ಣುಮುಕ್ಕ ಹಾವನ್ನು ರಕ್ಷಿಸಿರುವ ಅರಣ್ಯ ಸಂಚಾರಿ ದಳದ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಹಾವನ್ನು ಮನೆಯಲ್ಲಿ ಇಟ್ಟುಕೊಂಡರೆ ಕೋಟ್ಯಾಧಿಪತಿಗಳಾಗಬಹುದೆಂದು ದುಷ್ಕರ್ಮಿಗಳು ಸುಳ್ಳು ಸುದ್ದಿ ಹಬ್ಬಿಸಿ, ಮಣ್ಣುಮುಕ್ಕ ಹಾವನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು!

ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ…

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…

ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.