ಬೆಂಗಳೂರು : ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆಯ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಅವರ ಪತ್ತೆಗಾಗಿ ಸಿಸಿಬಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಸಂಪತ್ ರಾಜ್ ಅವರು, ಆಸ್ಪತ್ರೆಯಿಂದಲೇ ತಲೆ ತಪ್ಪಿಸಿಕೊಂಡಿದ್ದಾರೆ. ಅವರು, ಬೇರೆ ರಾಜ್ಯಕ್ಕೆ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಫೋನ್ ಕೂಡ ಸ್ವೀಚ್ ಆಫ್ ಆಗಿದೆ. ಇದರೊಂದಿಗೆ ಅವರ ಕುಟುಂಬಸ್ಥರನ್ನು ಪತ್ತೆ ಹಚ್ಚುವ ಕಾರ್ಯ ಕೂಡ ವಿಫಲವಾಗಿದೆ. ಸಂಪತ್ ರಾಜ್ ಇರುವಿಕೆಯ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಸುಳಿವು ಸಿಕ್ಕಿದೆ ಎಂದು ತಿಳಿದು ಬಂದಿದೆ. ಶೀಘ್ರದಲ್ಲಿಯೇ ಬಂಧಿಸಲಾಗುತ್ತದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. 

ಸಂಪತ್ ರಾಜ್ ಬಿಡುಗಡೆಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಸ್ಪತ್ರೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿತ್ತು. ಅವರು ಕೂಡ ಅದನ್ನು ಪಾಲಿಸಿಲ್ಲ. ಹೀಗಾಗಿ ಆಸ್ಪತ್ರೆಗೂ ನೊಟೀಸ್ ನೀಡಲಾಗಿದೆ. 

ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಸಂಪತ್ ರಾಜ್, ಸೋಂಕು ತಗುಲಿರುವ ನೆಪದಲ್ಲಿ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಸಿಸಿಬಿ ಅಧಿಕಾರಿಗಳು ತೆರಳುವ ಹೊತ್ತಿಗಾಗಲೇ ಡಿಸ್ಚಾರ್ಜ್ ಆಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸ್ವಯಂ ನಿವೃತ್ತಿಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

ನಾಡಿನ ಸಂಸ್ಕೃತಿ ಉಳಿಸಿ ಬೆಳಸುವಲ್ಲಿ ಕಸಾಪ ಮಹತ್ವ ಪಾತ್ರ ಹೊಂದಿದೆ

ಪಟ್ಟಣದಲ್ಲಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ 300ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಹೇಳಿದರು.