ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,014ರಷ್ಟು ದಾಖಲಾಗಿದೆ.

ಅಲ್ಲದೇ, ಇಂದು 7,468 ಮಂದಿಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು 28 ಸೋಂಕಿತರು ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಬಲಿಯಾದವರ ಸಂಖ್ಯೆ 11,168ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ.

55,017 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 956 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿನ ಖಚಿತ ಪ್ರಮಾಣ ಶೇ.2.96 ಮತ್ತು ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.0.92 ಇದೆ.

ಇಂದು, ಬಾಗಲಕೋಟೆ 24, ಬಳ್ಳಾರಿ 70, ಬೆಳಗಾವಿ 35, ಬೆಂಗಳೂರು ಗ್ರಾಮಾಂತರ 44, ಬೆಂಗಳೂರು ನಗರ 1,621, ಬೀದರ್ 3, ಚಾಮರಾಜನಗರ 28, ಚಿಕ್ಕಬಳ್ಳಾಪುರ 33, ಚಿಕ್ಕಮಗಳೂರು 35, ಚಿತ್ರದುರ್ಗ 59, ದಕ್ಷಿಣ ಕನ್ನಡ 95, ದಾವಣಗೆರೆ 47, ಧಾರವಾಡ 27, ಗದಗ 23, ಹಾಸನ 173, ಹಾವೇರಿ 29, ಕಲಬುರಗಿ 32, ಕೊಡಗು 17, ಕೋಲಾರ 47, ಕೊಪ್ಪಳ 8, ಮಂಡ್ಯ 89, ಮೈಸೂರು 161, ರಾಯಚೂರು 16, ರಾಮನಗರ 12, ಶಿವಮೊಗ್ಗ 18, ತುಮಕೂರು 53, ಉಡುಪಿ 49, ಉತ್ತರ ಕನ್ನಡ 24, ವಿಜಯಪುರ 122 ಮತ್ತು ಯಾದಗಿರಿಯಲ್ಲಿ 20 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You May Also Like

ಶಾರ್ಪ ಶೂಟರಗಳಿಂದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ ಹತ್ಯೆಗೆ ಸಂಚು ಶಾಸಕರಿಗೆ ಭದ್ರತೆ

ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಎಲ್ಲರೂ ಬೆಚ್ಚಿಬಿಳಿಸುವ ವಿಡಿಯೊಂದು ಹರಿದಾಡುತ್ತಿದ್ದು , ಕುಳ್ಳ ದೇವರಾಜ ಮತ್ತು ಗೋಪಾಲಕೃಷ್ಣ  ಅವರ…

ಬೆಳ್ಳಂಬೆಳಿಗ್ಗೆ ಲೋಕಾ ರೈಡ್; ಗದಗ ನಗರಸಭೆ ಎಇಇ ಬಂಡಿವಡ್ಡರ ಸೇರಿ ರಾಜ್ಯದ 8 ಅಧಿಕಾರಿಗಳ ಮನೆ, ಕಛೇರಿ ಮೇಲೆ ದಾಳಿ..!

ಉತ್ತರಪ್ರಭ, ಗದಗ :ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಜ್ಯಾದ  ಗದಗ, ಬಳ್ಳಾರಿ, ಬೀದರ, ಬೆಂಗಳೂರು, ರಾಯಚೂರು, ಬೆಳಗಾವಿ,…

ಸುಕ್ಕಾ ಹೊಡದ್ ಒಂಚೂರು ಉಪ್ಪಿನಕಾಯಿ ಒಳಗೋದ ಕೂಡ್ಲೆ ಏನಾತಂತೀರಿ…!

ಹೊಗ್ಗೋ ನಿನ್ನ ತಲಿ ದಿಮ್ ಹಿಡದಂಗಾಗಿ ಹ್ಯಂಗ್ಯಂಗರ ಮಾತಾಡಾಕತ್ತಿನಿ ಅನಸಾಕತ್ತೈತಿ ನಂಗ. ಅಯ್ಯೋ ನಂಗು ಹಂಗಾ ಅನಾಸಾಕತ್ತೈತಿ. ತಲಿ ದಿಮ್ಮಿನ ವಿಷಯ ಹೋಗ್ಲಿ ಹ್ಯಾಂಗಿತ್ತು ಮೊದಲ ದಿನದ ಅನುಭವ….!

ರಾಯಚೂರಿನಲ್ಲಿಂದು 9 ಕೊರೊನಾ ಪಾಟಿಟಿವ್..!

ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ.