ಗದಗ: ಬಂಜಾರ – ಲಂಬಾಣಿ ಸಮಾಜದ ಕುಲಗುರು, ಸಂತ ಸೇವಾಲಾಲ್ ವಂಶಸ್ಥರಾದ ಪೂಜ್ಯ ಡಾ.ರಾಮ್ ರಾವ್ ಮಹಾರಾಜ್ ಶುಕ್ರವಾರ ಲಿಂಗೈಕ್ಯರಾಗಿದ್ದಾರೆ.

ಬಂಜಾರರ ಆರಾಧ್ಯ ದೈವಸ್ವರೂಪಿ, ಮಹಾರಾಷ್ಟ್ರ ಪೌರಾಗಡ್ ನ  ಪರಮಪೂಜ್ಯ ಡಾ. ರಾಮ್ ರಾವ್ ಮಹಾರಾಜರು ನಿನ್ನೆ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 10.30ಕ್ಕೆ ಶಿವೈಕ್ಯರಾಗಿದ್ದಾರೆ. ಇದರಿಂದ ಬಂಜಾರ ಜನಾಂಗಕ್ಕೆ ತುಂಬಲಾರದ ನಷ್ಟ ಆಗಿದೆ.

ಪೂಜ್ಯರ ಅಂತ್ಯಕ್ರಿಯೇ ಸೋಮವಾರ ಮಹರಾಷ್ಟ್ರದ ಪೌರಾದೇವಿಯಲ್ಲಿ ನಡೆಯಲಿದೆ. ಜಗತ್ತಿನಾದ್ಯಂತ ಅಪಾರ ಭಕ್ತ ಸಮೂಹ ಹೊಂದಿರುವ ಕಾರಣ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.   

ರಾಮ್ ರಾವ್ ಮಹಾರಾಜರು ಲಿಂಗೈಕ್ಯರಾದ ಹಿನ್ನೆಲೆ ರಾಜ್ಯ ಸೇರಿದಂತೆ ದೇಶ ಹಾಗೂ ವಿದೇಶದ ಬಂಜಾರ ಬಾಂಧವರು ಶ್ರದ್ಧಾಂಜಲಿ ಸಭೆಗಳ ಮೂಲಕ ಗೌರವ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ.

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ಕಾರುಗಳನ್ನು ಕದಿಯುತ್ತಿದ್ದ ಸಿನಿಮಾ ನಟನ ಬಂಧನ!

ಲಕ್ನೋ : ಸಿನಿಮಾನ ನಟನೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇಟಲಿ ದಾಟಿ ಮುಂದೆ ಹೋದ ಭಾರತ!!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ…

ಮದುಮಗ ಹಾರ ಹಾಕಿದ್ ಕೂಡಲೇ ಖುಷಿಯಾದ ಮದುಮಗಳು ಮಾಡಿದ್ದೇನು?

ಉತ್ತರ ಪ್ರದೇಶ: ಪ್ರತಿಯೊಬ್ಬರಿಗೂ ಮದುವೆ ಬಗ್ಗೆ ಅವರದ್ದೆ ಕನಸಿರುತ್ತೆ. ಆಸೆ-ಆಕಾಂಕ್ಷೆಗಳಿರುತ್ತೆ. ಆದರೆ ಇಲ್ಲೊಬ್ಬ ಯುವತಿ ಮದುಮಗ ತನ್ನ ಕೊರಳಿಗೆ ಹಾರ ಹಾಕಿದ ತಕ್ಷಣ ತನ್ನ ಪ್ರತಿಕ್ರಿಯೇ ಹೇಗಿರಬೇಕೆಂದು ವಿಭಿನ್ನ ಕಲ್ಪನೆಯೊಂದನ್ನು ಕಟ್ಟಿಕೊಂಡಿದ್ದಳು. ಈ ಕಾರಣಕ್ಕಾಗಿ ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.