ಗದಗ: ಬಂಜಾರ – ಲಂಬಾಣಿ ಸಮಾಜದ ಕುಲಗುರು, ಸಂತ ಸೇವಾಲಾಲ್ ವಂಶಸ್ಥರಾದ ಪೂಜ್ಯ ಡಾ.ರಾಮ್ ರಾವ್ ಮಹಾರಾಜ್ ಶುಕ್ರವಾರ ಲಿಂಗೈಕ್ಯರಾಗಿದ್ದಾರೆ.

ಬಂಜಾರರ ಆರಾಧ್ಯ ದೈವಸ್ವರೂಪಿ, ಮಹಾರಾಷ್ಟ್ರ ಪೌರಾಗಡ್ ನ  ಪರಮಪೂಜ್ಯ ಡಾ. ರಾಮ್ ರಾವ್ ಮಹಾರಾಜರು ನಿನ್ನೆ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 10.30ಕ್ಕೆ ಶಿವೈಕ್ಯರಾಗಿದ್ದಾರೆ. ಇದರಿಂದ ಬಂಜಾರ ಜನಾಂಗಕ್ಕೆ ತುಂಬಲಾರದ ನಷ್ಟ ಆಗಿದೆ.

ಪೂಜ್ಯರ ಅಂತ್ಯಕ್ರಿಯೇ ಸೋಮವಾರ ಮಹರಾಷ್ಟ್ರದ ಪೌರಾದೇವಿಯಲ್ಲಿ ನಡೆಯಲಿದೆ. ಜಗತ್ತಿನಾದ್ಯಂತ ಅಪಾರ ಭಕ್ತ ಸಮೂಹ ಹೊಂದಿರುವ ಕಾರಣ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.   

ರಾಮ್ ರಾವ್ ಮಹಾರಾಜರು ಲಿಂಗೈಕ್ಯರಾದ ಹಿನ್ನೆಲೆ ರಾಜ್ಯ ಸೇರಿದಂತೆ ದೇಶ ಹಾಗೂ ವಿದೇಶದ ಬಂಜಾರ ಬಾಂಧವರು ಶ್ರದ್ಧಾಂಜಲಿ ಸಭೆಗಳ ಮೂಲಕ ಗೌರವ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮದುಮಗ ಹಾರ ಹಾಕಿದ್ ಕೂಡಲೇ ಖುಷಿಯಾದ ಮದುಮಗಳು ಮಾಡಿದ್ದೇನು?

ಉತ್ತರ ಪ್ರದೇಶ: ಪ್ರತಿಯೊಬ್ಬರಿಗೂ ಮದುವೆ ಬಗ್ಗೆ ಅವರದ್ದೆ ಕನಸಿರುತ್ತೆ. ಆಸೆ-ಆಕಾಂಕ್ಷೆಗಳಿರುತ್ತೆ. ಆದರೆ ಇಲ್ಲೊಬ್ಬ ಯುವತಿ ಮದುಮಗ ತನ್ನ ಕೊರಳಿಗೆ ಹಾರ ಹಾಕಿದ ತಕ್ಷಣ ತನ್ನ ಪ್ರತಿಕ್ರಿಯೇ ಹೇಗಿರಬೇಕೆಂದು ವಿಭಿನ್ನ ಕಲ್ಪನೆಯೊಂದನ್ನು ಕಟ್ಟಿಕೊಂಡಿದ್ದಳು. ಈ ಕಾರಣಕ್ಕಾಗಿ ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…

ಪಾಕ್ ನ ಉಪಟಳ – ಯೋಧ ಹುತಾತ್ಮ!

ಶ್ರೀನಗರ : ಲಡಾಖ್ ನಲ್ಲಿ ಚೀನಾ ಸಂಘರ್ಷ ನಡೆಸುತ್ತಿದ್ದರೆ, ಇನ್ನೊಂದೆಡೆ ಪಾಕ್ ತನ್ನ ಉಪಟಳ ಮುಂದುವರೆಸಿದೆ. ಗಡಿ ಉಲ್ಲಂಘಿಸಿ ಬಂದ ಪಾಕಿಸ್ತಾನ ಸೇನಾ ಯೋಧರು ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.