ಲಕ್ನೋ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ತನ್ನ ಅಣ್ಣನನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಉತ್ತರ ಪ್ರದೇಶದ ಚಂದೌಲಿಯ ಧುರಿ ಕೋಟ್ ಗ್ರಾಮದ ಹತ್ತಿರ ರಾಕೇಶ್ ರೋಶನ್ ಎಂಬುವವರ ಮೃತ ದೇಹ ಪತ್ತೆಯಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು ಕೊಲೆಯ ರಹಸ್ಯ ಬಯಲಿಗೆ ತಂದಿದ್ದಾರೆ. ಅಲ್ಲದೇ, ಅ. 29ರಂದು ಎನ್‍ ಕೌಂಟರ್ ಪ್ರಕರಣದಲ್ಲಿ ಅಶುತೋಷ್ ಯಾದವ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಈ ಸಂದರ್ಭದಲ್ಲಿ ಬಂಧಿಯಾಗಿರುವ ಆಶುತೋಷ್, ಕೊಲೆಯ ಕಥೆಯನ್ನು ಪೊಲೀಸರಿಗೆ ತಿಳಿಸಿದ್ದಾನೆ. ಮುಖೇಶ್ ಯಾದವ್ ಎಂಬ ವ್ಯಕ್ತಿಯೇ ರಾಕೇಶ್ ನನ್ನು ಕೊಲೆ ಮಾಡಿದ್ದು ಎಂಬುವುದು ತಿಳಿದಿದೆ. ಅದಕ್ಕೆ ನಾನು ಕೂಡ ಸಾಥ್ ನೀಡಿದ್ದೇನೆ ಎಂದು  ಹೇಳಿದ್ದಾನೆ. ಈ ಹೇಳಿಕೆ ಆಧರಿಸಿ ಪೊಲೀಸರು, ಮುಖೇಶ್ ನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಸತ್ಯ ಬಯಲಿಗೆ ಬಂದಿದೆ. 

ಅಲ್ಲದೇ, ಪತ್ನಿಯೊಂದಿಗೆ ತನ್ನ ಅಣ್ಣ ಅಕ್ರಮ ಸಂಬಂಧ ಹೊಂದಿದ್ದರಿಂದಾಗಿ ಕೊಲೆ ಮಾಡಿರುವುದಾಗಿ ಆರೋಪಿ ಮುಖೇಶ್ ಹೇಳಿದ್ದಾನೆ. ಮೂರು ವರ್ಷಗಳ ಹಿಂದೆ ಪ್ರಕರಣವೊಂದರಲ್ಲಿ ಮುಖೇಶ್ ಜೈಲುಪಾಲಾಗಿದ್ದ ಸಂದರ್ಭದಲ್ಲಿ ಪತ್ನಿ, ಬಾವನ ಜೊತೆಯಲ್ಲಿ ಅಕ್ರಮ ಸಂಬಂಧ ಹೊಂದಿದದ್ದಳು. ಕೆಲವು ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದ ಮುಖೇಶ್ ನಿಗೆ ಈ ವಿಷಯ ಗೊತ್ತಾಗಿದೆ. 

ಹೀಗಾಗಿ ಜೈಲಿನಲ್ಲಿ ಪರಿಚಿತನಾಗಿದ್ದ ಅಶುತೋಷ್ ಸಹಾಯ ಪಡೆದು, ಕೊಲೆ ಮಾಡಿದ್ದಾಗಿ ರಾಕೇಶ್ ಒಪ್ಪಿಕೊಂಡಿದ್ದಾನೆ. 

Leave a Reply

Your email address will not be published. Required fields are marked *

You May Also Like

ಕೊರೊನಾ ದುಷ್ಪರಿಣಾಮ: ನಗರಗಳ 14 ಕೋಟಿ ಜನರ ಬದುಕು ದುಸ್ತರ

ದೆಹಲಿ: ದೇಶಾದ್ಯಂತ ಕೊರೊನಾ ಕಾರಣದಿಂದಾಗಿ ಲಾಕ್ಡೌನ್ ದುಷ್ಪರಿಣಾಮ ನಗರ ಪ್ರದೇಶಗಳಲ್ಲಿ ವಾಸವಾಗಿರುವ ನಾಗರಿಕರ ಮೇಲೆ ಹೆಚ್ಚಾಗಿದೆ.…

ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣ – 18 ಜನರ ಬಂಧನ!

ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಶಾಕಿಂಗ್ ನ್ಯೂಸ್: ಕರ್ನಾಟಕವೀಗ ಸೋಂಕು ಅತಿ ವೇಗದಲ್ಲಿ ಹರಡುತ್ತಿರುವ ರಾಜ್ಯ: ಕೇಸ್-ಲೋಡ್ ಸಂಖ್ಯೆಯಲ್ಲಿ 5ನೆ ಸ್ಥಾನ

ಸೋಂಕಿತರ ಸಂಖ್ಯೆಯ ಆಧಾರದ ಪಟ್ಟಿಯಲ್ಲಿ (ಕೇಸ್-ಲೋಡ್) ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 6ನೆ ಸ್ಥಾನದಲ್ಲಿದ್ದ ಕರ್ನಾಟಕ ಶನಿವಾರ ಉತ್ತರಪ್ರದೇಶವನ್ನು ದಾಟಿ 5ನೆ ಸ್ಥಾನಕ್ಕೆ ಏರಿದೆ.