ಲಕ್ನೋ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ತನ್ನ ಅಣ್ಣನನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಉತ್ತರ ಪ್ರದೇಶದ ಚಂದೌಲಿಯ ಧುರಿ ಕೋಟ್ ಗ್ರಾಮದ ಹತ್ತಿರ ರಾಕೇಶ್ ರೋಶನ್ ಎಂಬುವವರ ಮೃತ ದೇಹ ಪತ್ತೆಯಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು ಕೊಲೆಯ ರಹಸ್ಯ ಬಯಲಿಗೆ ತಂದಿದ್ದಾರೆ. ಅಲ್ಲದೇ, ಅ. 29ರಂದು ಎನ್‍ ಕೌಂಟರ್ ಪ್ರಕರಣದಲ್ಲಿ ಅಶುತೋಷ್ ಯಾದವ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಈ ಸಂದರ್ಭದಲ್ಲಿ ಬಂಧಿಯಾಗಿರುವ ಆಶುತೋಷ್, ಕೊಲೆಯ ಕಥೆಯನ್ನು ಪೊಲೀಸರಿಗೆ ತಿಳಿಸಿದ್ದಾನೆ. ಮುಖೇಶ್ ಯಾದವ್ ಎಂಬ ವ್ಯಕ್ತಿಯೇ ರಾಕೇಶ್ ನನ್ನು ಕೊಲೆ ಮಾಡಿದ್ದು ಎಂಬುವುದು ತಿಳಿದಿದೆ. ಅದಕ್ಕೆ ನಾನು ಕೂಡ ಸಾಥ್ ನೀಡಿದ್ದೇನೆ ಎಂದು  ಹೇಳಿದ್ದಾನೆ. ಈ ಹೇಳಿಕೆ ಆಧರಿಸಿ ಪೊಲೀಸರು, ಮುಖೇಶ್ ನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಸತ್ಯ ಬಯಲಿಗೆ ಬಂದಿದೆ. 

ಅಲ್ಲದೇ, ಪತ್ನಿಯೊಂದಿಗೆ ತನ್ನ ಅಣ್ಣ ಅಕ್ರಮ ಸಂಬಂಧ ಹೊಂದಿದ್ದರಿಂದಾಗಿ ಕೊಲೆ ಮಾಡಿರುವುದಾಗಿ ಆರೋಪಿ ಮುಖೇಶ್ ಹೇಳಿದ್ದಾನೆ. ಮೂರು ವರ್ಷಗಳ ಹಿಂದೆ ಪ್ರಕರಣವೊಂದರಲ್ಲಿ ಮುಖೇಶ್ ಜೈಲುಪಾಲಾಗಿದ್ದ ಸಂದರ್ಭದಲ್ಲಿ ಪತ್ನಿ, ಬಾವನ ಜೊತೆಯಲ್ಲಿ ಅಕ್ರಮ ಸಂಬಂಧ ಹೊಂದಿದದ್ದಳು. ಕೆಲವು ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದ ಮುಖೇಶ್ ನಿಗೆ ಈ ವಿಷಯ ಗೊತ್ತಾಗಿದೆ. 

ಹೀಗಾಗಿ ಜೈಲಿನಲ್ಲಿ ಪರಿಚಿತನಾಗಿದ್ದ ಅಶುತೋಷ್ ಸಹಾಯ ಪಡೆದು, ಕೊಲೆ ಮಾಡಿದ್ದಾಗಿ ರಾಕೇಶ್ ಒಪ್ಪಿಕೊಂಡಿದ್ದಾನೆ. 

Leave a Reply

Your email address will not be published. Required fields are marked *

You May Also Like

ಮಹಾಮಾರಿಗೆ ತತ್ತರಿಸಿದ ಮಹಾರಾಷ್ಟ್ರ- ನಿನ್ನೆ ಒಂದೇ ದಿನ ಎಷ್ಟು ಕೇಸ್ ಗಳು ಗೊತ್ತಾ?

ಮುಂಬಯಿ : ಕೊರೊನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ…

ಪೆಟ್ರೋಲ್ – ಡಿಸೇಲ್ ದರ ದುಬಾರಿಯಾಗಿದ್ದರ ಮಧ್ಯೆಯೂ ಈ ರಾಜ್ಯಗಳ ಜನತೆಗೆ ʼಬಿಗ್ ರಿಲೀಫ್ʼ

ದೇಶದಲ್ಲಿ ಏರುತ್ತಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕುತ್ತಲೇ ಇದೆ. ಕೆಲವು ರಾಜ್ಯಗಳಲ್ಲಂತೂ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 100ರ ಗಡಿ ದಾಟಿದೆ. ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನ ದೂಷಿಸುತ್ತಲೇ ಇದೆ.

ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ!

ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ.

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.