ಅಬುಧಾಬಿ : ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ತನ್ನ ಪಾಲಿನ ಕೊನೆಯ ಪಂದ್ಯವನ್ನು ಗೆಲ್ಲುವುದರ ಮೂಲಕ ಟೂರ್ನಿಯಿಂದ ಹೊರ ಬಿದ್ದಿದ್ದು, ಪಂಜಾಬ್ ತಂಡ ಕೂಡ ಹೊರ ಹೋಗುವಂತೆ ಮಾಡಿದೆ.

ಐಪಿಎಲ್ ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ವಿಕೆಟ್ಗೆಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಿಂದ ಹೊರ ನಡೆದಿದೆ. ಈ ಮೂಲಕ ಪಂಜಾಬ್ ತಂಡದ ಓಟಕ್ಕೆ ಬ್ರೇಕ್ ಹಾಕಿ, ಅದನ್ನು ಕೂಡ ಹೊರ ದಬ್ಬಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ, ಉತ್ತಮ ಆರಂಭ ಪಡೆದರೂ ಮಧ್ಯಮ ಕ್ರಮಾಂಕದ ವೈಫಲ್ಯದಿಂದ ಹೆಚ್ಚಿನ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ನಿಗದಿತ 20 ಓವರ್ ಗಳಲ್ಲಿ 154 ರನ್ ಪೇರಿಸಿತು. ಈ ಸುಲಭ ಗುರಿ ಬೆನ್ನಟ್ಟಿದ ಚೆನ್ನೈ ತಂಡ ಫಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ ವಾಡ್ ಅವರ ಅದ್ಭುತ ಬ್ಯಾಟಿಂಗ್ ನಿಂದಾಗಿ ಸುಲಭವಾಗಿ ಗೆದ್ದು ಬೀಗಿತು.

ಸದ್ಯ ಮುಂಬಯಿ ತಂಡವೊಂದೇ ಇಲ್ಲಿಯವರೆಗೂ ಪ್ಲೇ ಆಫ್ ಹಂತ ತಲುಪಿದ ತಂಡವಾಗಿದೆ. ಪಂಜಾಬ್ ತಂಡ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ ರನ್‍ ರೇಟ್ ಆಧಾರದ ಮೇಲೆ ಪ್ಲೇ ಆಫ್ ಹಂತ ತಲುಪುವ ಅವಕಾಶ ಪಡೆಯುತ್ತಿತ್ತು.

154 ರನ್‍ ಗಳ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಫಫ್ ಡು ಪ್ಲೆಸಿಸ್ ಮತ್ತು ರುತುರಾಜ್ ಗಾಯಕ್ವಡ್ ಮೊದಲ ವಿಕೆಟ್ಗೆಗ ಅರ್ಧಶತಕದ ಜೊತೆಯಾಟವಾಡಿದರು. ಪರಿಣಾಮ ಪವರ್ ಪ್ಲೇ ಮುಕ್ತಾಯದ ವೇಳೆಗೆ ಚೆನ್ನೈ ತಂಡ ಒಂದು ವಿಕೆಟ್ ಕಳೆದುಕೊಳ್ಳದೇ ಬರೋಬ್ಬರಿ 57 ರನ್ ಸಿಡಿಸಿತು.

Leave a Reply

Your email address will not be published. Required fields are marked *

You May Also Like

ಐಪಿಎಲ್ ನಲ್ಲಿ ಕೊಹ್ಲಿ, ಎಬಿಡಿಯನ್ನು ಕೈ ಬಿಡಬೇಕು ಎಂದಿರುವ ರಾಹುಲ್!

ಅಬುಧಾಬಿ : ಕೆ.ಎಲ್. ರಾಹುಲ್ ಅವರು ಮುಂದಿನ ಐಪಿಎಲ್ ನಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಅವರನ್ನು ಕೈ ಬಿಡಬೇಕು ಎಂದು ಹೇಳಿದ್ದಾರೆ.

ಇಂಡೋ-ನೇಪಾಳ ಕ್ರಿಕೆಟ್ ಟ್ರೋಫಿ “ನಿಡಗುಂದಿ ತಂಡಕ್ಕೆ ಚಿನ್ನದ ಪದಕ”

ಉತ್ತರಪ್ರಭ ಸುದ್ದಿ ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್…

ಸೇಡು ತೀರಿಸಿಕೊಳ್ಳುವುದರ ಮೂಲಕ ಗೆಲುವಿನ ಲಯ ಕಂಡುಕೊಂಡ ಚೆನ್ನೈ!

ದುಬೈ : ಆರ್ ಸಿಬಿ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟು ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಈ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಮಾಜಿ ಕ್ರಿಕೆಟ್ ಕ್ಯಾಪ್ಟನ್ ಮೇಲೊಂದು ಜೀವನ ಚಿತ್ರ.

ನವದೆಹಲಿ: ನಮ್ಮೆಲ್ಲರ ನೆಚ್ಚಿನ ಭಾರತದ ಮಾಜಿ ಕ್ಯಾಪ್ಟನ್ ಹಾಗೂ ದಾದಾ ಎಂದಲೆ ಹೆಸರಾದಂತ ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಾಲಿವುಡ್ ನಲ್ಲಿ ತಮ್ಮ ಜೀವನ ಚರಿತ್ರೆ ಮೇಲೊಂದು ಚಿತ್ರದ ಚಿತ್ರೀಕರಣಕ್ಕೆ ಒಪ್ಪಿಕೊಂಡಿದ್ದಾರೆ.