ಪುಟ್ಟ ಕಂದಮ್ಮಳ ಮೇಲೆ ಪಾಪಿ ಪೊಲೀಸ್ ಈ ಕೃತ್ಯ ಎಸಗಿದನೇ?

ರಾಯ್ಪುರ : ಕಂದಮ್ಮನ ಮೇಲೆ ಪಾಪಿ ಪೊಲೀಸ್ ಒಬ್ಬ ಸಿಗರೇಟ್ ನಿಂದ ಸುಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಪ್ರಕರಣ ಛತ್ತೀಸ್ ಗಢದ ಬಾಲೋಡ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಅವಿನಾಶ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ ಸ್ಟೇಬಲ್ ಬಂಧಿಸಿ, ಕೆಲಸದಿಂದ ವಜಾ ಮಾಡಲಾಗಿದೆ. ಸದ್ಯ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 323ರ ಅಡಿ ಪ್ರಕರಣ ದಾಖಲಾಗಿದೆ. 

ಬಾಲಕಿಯ ಮೇಲೆ ಕೃತ್ಯ ಎಸಗಿದ ನಂತರ ಆರೋಪಿ ಪರಾರಿಯಾಗಿದ್ದ. ಆರೋಪಿ ಪೊಲೀಸ್ ಕಾನ್ಸ್ ಸ್ಟೇಬಲ್ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಬಲೋಡ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಸಿಂಗ್ ಮೀನಾ ತಿಳಿಸಿದ್ದಾರೆ.

ಆರೋಪಿ ಕಳೆದ 20 ದಿನಗಳ ಹಿಂದೆಯಷ್ಟೇ ವರ್ಗಾವಣೆಗೊಂಡಿದ್ದ. ಈ ವ್ಯಕ್ತಿ ಸಂತ್ರಸ್ಥೆಯ ಮನೆಯಲ್ಲಿ ಬಾಡಿಗೆಗೆ ಇದ್ದ. ಬಾಲಕಿಯ ತಾಯಿ ಜಾನಪದ ಗಾಯಕಿ ಲಕ್ಷ್ಮಿ ನಂದ್ರೆ, ಈ ವ್ಯಕ್ತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಹಣ ಪಡೆದಿದ್ದರು. 

ಇತ್ತೀಚೆಗೆ ಸಂತ್ರಸ್ಥೆಯ ಮನೆಗೆ ಆರೋಪಿ ಕುಡಿದು ಬಂದಿದ್ದ. ಈ ಸಂದರ್ಭದಲ್ಲಿ ಮಗುವಿಗೆ ಅಪ್ಪ ಎಂದು ಕರೆಯುವಂತೆ ಹೇಳಿದ್ದಾನೆ. ಇದಕ್ಕೆ ಮಗು ನಿರಾಕರಿಸಿದೆ. ಇದರಿಂದ ಕೋಪಗೊಂಡ ಪಾಪಿ, ಮುಖ, ಹೊಟ್ಟೆ, ಬೆನ್ನು ಹಾಗೂ ಕೈಗಳಿಗೆ ಸಿಗರೇಟ್ ನಿಂದ ಸುಟ್ಟು ಗಾಯ ಮಾಡಿದ್ದಾನೆ.

ಈ ವಿಚಾರ ಗಮನಕ್ಕೆ ಬಂದ ಕೂಡಲೇ ಮಹಿಳೆ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. 

Exit mobile version