ಗಜೇಂದ್ರಗಡ: ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಟ್ಟಣದ ಎಸ್ಬಿಐ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಂಡು ಹೋಗುವಾಗ ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಿದ 2 ಪ್ರತ್ಯೇಕ ಪ್ರಕರಣಗಳನ್ನು ಸ್ಥಳೀಯ ಠಾಣೆ ಪಿಎಸ್ಐ ಗುರುಶಾಂತ್ ದಾಶ್ಯಾಳ ನೇತೃತ್ವದ ಪೊಲೀಸರ ತಂಡ ಬೇಧಿಸಿ, ಓರ್ವ ಮಹಿಳಾ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 2,20,000 ರೂ, ಹಣ ವಶಕ್ಕೆ ಪಡೆಯಲಾಗಿದೆ. ಆರೋಪಿತರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.