ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಲಕ್ಷ್ಮೇಶ್ವರ ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ರಕ್ಷಣಾ ವೇದಿಕೆ ನಗರ ಘಟಕದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಶಿಕ್ಷಕ ಜಿ.ಎಸ್.ಗುಡಗೇರಿ ಹಾಗೂ ಈಶ್ವರ್ ಮೆಡ್ಲೇರಿ ಶಿಕ್ಷಕರು ನಾಡಿ ಏಕೀಕರಣದ ಬಗ್ಗೆ ಹಾಗೂ ಕರ್ನಾಟಕ ರಾಜ್ಯ ಉದಯವಾಗಿ 55 ವರ್ಷ ವರ್ಷಗಳ ತುಂಬಿ 56 ನೇ ವಸಂತಕ್ಕೆ ಪಾದರ್ಪಣೆ ಮಾಡುತ್ತಿದ್ದು ನಮಗೆಲ್ಲರಿಗೂ ಸಂತೋಷದ ವಿಷಯ ಹಾಗೂ ಕರ್ನಾಟಕದ ಭಾಷೆ-ಗಡಿ ನಾಡು ನುಡಿ ವಿಚಾರಗಳಿಗೆ ಧಕ್ಕೆ ಬಂದಾಗ ನಾವೆಲ್ಲರೂ ಒಗ್ಗಟ್ಟಾಗಿರುವ ಅವಶ್ಯಕತೆಯಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಗರ ಘಟಕ ಹಾಗೂ ಲಕ್ಷ್ಮೇಶ್ವರ ತಾಲ್ಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಎಲ್ಲಾ ಕರವೇ ಕಾರ್ಯಕರ್ತರು ಹಳೆ ಬಸ್ ನಿಲ್ದಾಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಧ್ವಜಾರೋಹಣ ನೆರವೇರಿಸಿದರು. ಲಕ್ಷ್ಮೇಶ್ವರ ವಿದ್ಯಾರಣ್ಯ ಸರ್ಕಲ್ ನಲ್ಲಿರುವ ಆದಯ್ಯನ ಮೂರ್ತಿಗೆ ಹಾಗೂ ಪಂಪನ ಮೂರ್ತಿಗೆ ಮಾಲೆ ಹಾಕಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು.