ಬೆಳಗಾವಿ : ಡಿಸಿಎಂ ಲಕ್ಷ್ಮಣ ಸವದಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ತಿರುಗೇಟು ನೀಡಿ, ವಾಗ್ದಾಳಿ ನಡೆಸಿದ್ದಾರೆ.

ಸೂರ್ಯ, ಚಂದ್ರರು ಇರುವವರೆಗೂ ಬೆಳಗಾವಿ ಕರ್ನಾಟಕಕ್ಕೆ ಸಂಬಂಧಿಸಿದ್ದು, ಈ ವಿಷಯದ ಕುರಿತು ಯಾರೇ ಹೇಳಿದರೂ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದ್ದಾರೆ.

ಇಲ್ಲಿದ್ದೂ ಕನ್ನಡ ನೆಲದ ವಿರುದ್ಧ ಯಾರೇ ಮಾತನಾಡಿದರೂ ಕರ್ನಾಟಕ ಸರ್ಕಾರ ಅವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತದೆ. ಆನೆ ಹೊರಟರೆ ನಾಯಿ ಬೊಗಳುತ್ತವೆ. ಅದಕ್ಕೆ ನಾವು ಚಿಂತಿಸಬೇಕಿಲ್ಲ ಎಂದು ಮಹಾರಾಷ್ಟ್ರಕ್ಕೆ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ಏನೇ ಪ್ರಯತ್ನಿಸಿದರೂ ಬೆಳಗಾವಿ ನಮ್ಮದೇ. ಆ ರಾಜ್ಯ ತನ್ನ ತೀಟೆ ತೀರಿಸಿಕೊಳ್ಳುವುದಕ್ಕಾಗಿ ಈ ರೀತಿಯ ಮಾತುಗಳನ್ನು ಆಡುತ್ತದೆ. ಸಂಘಟನೆಗಾಗಿ ಮಹಾರಾಷ್ಟ್ರ ಈ ರೀತಿ ವರ್ತಿಸುತ್ತಿದೆ. ನವೆಂಬರ್ ತಿಂಗಳಲ್ಲಿ ಮಾತ್ರ ಅವರ ಹಾರಾಟ, ಚೀರಾಟ ಇರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ನಮ್ಮ ಜಾಗದಲ್ಲಿ ನಿಂತು ಹೇಳಿದರೆ, ನಾವು ಉತ್ತರ ನೀಡುತ್ತೇವೆ. ಹೇಡಿಯಂತೆ ಅವರ ನೆಲದಲ್ಲಿ ಕುಳಿತು ಮಾತನಾಡಿದರೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಫೆ. 24ರಿಂದ ಮುಳಗುಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಇದೇ ಫೆ 24 ರಿಂದ 26 ವರೆಗೆ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ, ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.

ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಅಭಿನಂದನೆಗಳು-ಸಿದ್ದಲಿಂಗಯ್ಯ ಹೊಂಬಾಳಿ ಮಠ

ಶಿರಹಟ್ಟಿ: ಹಿಂದೂ ಮುಸ್ಲಿಮ್ ಭಾವೈಕ್ಯತೆಗೆ ಹಾಗೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಶಿರಹಟ್ಟಿ ಪಕೀರೇಶ್ವರ ಸಂಸ್ಥಾನ ಮಠಕ್ಕೆ…

ರಾಜ್ಯದಲ್ಲಿ ಇಂದು 8 ಸಾವಿರದ ಗಡಿ ದಾಟಿದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 8,477 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆ ಕಂಡಿದೆ.