ಬೆಂಗಳೂರು : ಕನಕಪುರದಿಂದ ಬಂದವರೇ ಹಣ ಹಂಚಿಕೆ ಮಾಡಿದ್ದಾರೆ ಎಂದು ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.

ಕನಕಪುರದಿಂದ ಬಂದವರು ಹಣ ಹಂಚುವ ಸಂದರ್ಭದಲ್ಲಿ 7 ಕಡೆ ಸಿಕ್ಕಿದ್ದಾರೆ. ಹೀಗಾಗಿಯೇ 7 ಎಫ್ ಐಆರ್ ಗಳು ದಾಖಲಾಗಿವೆ. ಕೆಲವರು ವಾಹನಗಳನ್ನು ಬಿಟ್ಟು ಓಡಿ ಹೋಗಿದ್ದಾರೆ. ಸದ್ಯ ಎಲ್ಲ ಕಡೆ ತನಿಖೆ ನಡೆಯುತ್ತಿದೆ. ಅವರ ಹಣಕ್ಕಾಗಿ ಇಲ್ಲಿಯ ಜನ ಕಾಯುವುದಿಲ್ಲ. ಇಲ್ಲಿನ ಮತದಾರರೆಲ್ಲ ಶ್ರಮಿಕರು. ಅವರನ್ನು ಹಣದಿಂದ ಕೊಂಡುಕೊಳ್ಳಲು ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ಸಂಜೆಯಿಂದ ಹೊರಗಡೆಯ ಜನರು ಯಾರೂ ಇಲ್ಲಿ ಇರುವುದಿಲ್ಲ. ಹೀಗಾಗಿ ಜನ ನೆಮ್ಮದಿಯಾಗಿ ಮತ ಚಲಾಯಿಸಲಿ. ವಿರೋಧಿಗಳು ಒಂದು ಮತಕ್ಕೆ ರೂ. 2 ಸಾವಿರದಿಂದ 5 ಸಾವಿರದವರೆಗೂ ಆಮಿಷ ಒಡ್ಡುತ್ತಿದ್ದಾರೆ. ಸ್ವಲ್ಪ ಮೈಮರೆತರೂ ನಮ್ಮ ಕ್ಷೇತ್ರವೂ ಕೆಜೆ, ಡಿಜೆ ಹಳ್ಳಿ ಆಗುತ್ತದೆ. ಕೊಲೆಗಳೂ ನಡೆಯುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕನಕಪುರದಿಂದ ಜನರನ್ನು ಕರೆತಂದು ಬೆಂಗಳೂರನ್ನು ಹಾಳು ಮಾಡುವ ಅಗತ್ಯವಿಲ್ಲ. ಈ ನಗರವನ್ನು ಶಾಂತಿಯಿಂದ ಇರಲು ಬಿಡಿ. ನಾನು ಕ್ಷೇತ್ರಕ್ಕೆ ಮಿಲಿಟರಿ ಬರಲಿ ಅಂತ ಕೇಳಿದ್ದು, ಇದೇ ಕಾರಣಕ್ಕೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ನಾನು ಎಸ್ಕಾರ್ಟ್ ನಲ್ಲಿ ಓಡಾಡುವುದು ಕೆಲವರಿಗೆ ಬೇಸರ ತಂದಿರಬಹುದು: ಸಚಿವ ಡಾ. ನಾರಾಯಣಗೌಡ

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.