ಬೆಂಗಳೂರು: ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ.

ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಮುಂದೂಡಲಾಗಿದ್ದು, ನ. 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನ. 2ರಂದು ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಲಾಗುವುದು ಎಂದು ಸೂಚಿಸಿದ್ದ ಆಯೋಗ, ಈಗ ಪರಿಷ್ಕೃತ ದಿನಾಂಕ ಪ್ರಕಟಿಸಿ ಸುತ್ತೋಲೆ ಹೊರಡಿಸಿದೆ.

ಆಗ್ನೇಯ ಪದವೀಧರ ಕ್ಷೇತ್ರ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿದಿದ್ದರು.

Leave a Reply

Your email address will not be published. Required fields are marked *

You May Also Like

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ಬಿಗ್ ರಿಲೀಫ್

ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.