ನವದೆಹಲಿ : ಇಂದು ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿ, ಕರ್ನಾಟಕದ ನನ್ನ ಸಹೋದರ ಮತ್ತು

ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ಕನ್ನಡದಲ್ಲಿಯೇ ಶುಭಾಶಯ ಕೋರಿದ ಹಿನ್ನೆಲೆಯಲ್ಲಿ ರಾಜ್ಯದ ಜನರು ಮೆಚ್ಚುಗೆ ಹಾಗೂ ಅಭಿನಂದನೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ, ರೀ ಟ್ವೀಟ್ ಮಾಡುತ್ತಿದ್ದಾರೆ. ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 308 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824…

ವೃತ್ತಕ್ಕೆ ದಿ. ಆರ್.ಎನ್.ದೇಶಪಾಂಡೆ ನಾಮಕರಣಕ್ಕೆ ಮನವಿ

ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಕೊರೊನಾ ಎಫೆಕ್ಟ್: ಎಂಜನೀಯರಿಂಗ್, ಡಿಪ್ಲೋಮಾ, ಎಂಬಿಎ, ಐಟಿಐ ಉದ್ಯೋಗಿಗಳು ನರೆಗಾ ಕೆಲಸಕ್ಕೆ..!

ಉನ್ನತ ಶಿಕ್ಷಣ ಪಡೆದು ತಿಂಗಳಾದರೆ ಸಾಕು ಕೈತುಂಬ ಸಂಬಳ ಎಣಿಸುತ್ತಿದ್ದವರು ಬದುಕಿನ ಅನಿವಾರ್ಯತೆಗೆ ನರೇಗಾ ಕೂಲಿ ಕೆಲಸಕ್ಕೆ ಹೊರಟಿದ್ದಾರೆ.

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.