ಬೆಳಗಾವಿ: ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

ಎಂಇಎಸ್ ಕಾರ್ಯಕರ್ತರಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಕರಾಳ ದಿನಾಚರಣೆ ಆಚರಿಸದಂತೆ ಖಡಕ್ ಆದೇಶ ನೀಡಿದ್ದಾರೆ. ಆದರೂ ನಾಡ ದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಳಿಗ್ಗೆ 10ಕ್ಕೆ ಇಲ್ಲಿಯ ಶಿವಾಜಿ ಗಾರ್ಡನ್ ಹತ್ತಿರ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಮನೆಯ ಮಹಡಿ ಮೇಲೆ ನಿಂತು ಕಪ್ಪು ಬಲೂನ್ ಗಳನ್ನ ಹಾರಿ ಬಿಡಲು ಕೆಲವು ಪುಢಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ನಾಡ ದ್ರೋಹಿಗಳಿಗೆ ಮಹಾರಾಷ್ಟ್ರ ಸರ್ಕಾರ ಕೂಡ ಬೆಂಬಲ ನೀಡುತ್ತಿದೆ.

ಇಂದು ಮಹಾರಾಷ್ಟ್ರದಲ್ಲಿನ ಸಚಿವರು ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ನಗರದಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒಡಗಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ಇಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಟಿಕ್ ಟಾಕ್ ಬ್ಯಾನ್ ಗೆ ಆಗ್ರಹಿಸಿ ಮುಂಡರಗಿಯಲ್ಲಿ ಪ್ರತಿಭಟನೆ

ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…