ಬೆಳಗಾವಿ: ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

ಎಂಇಎಸ್ ಕಾರ್ಯಕರ್ತರಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಕರಾಳ ದಿನಾಚರಣೆ ಆಚರಿಸದಂತೆ ಖಡಕ್ ಆದೇಶ ನೀಡಿದ್ದಾರೆ. ಆದರೂ ನಾಡ ದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಳಿಗ್ಗೆ 10ಕ್ಕೆ ಇಲ್ಲಿಯ ಶಿವಾಜಿ ಗಾರ್ಡನ್ ಹತ್ತಿರ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಮನೆಯ ಮಹಡಿ ಮೇಲೆ ನಿಂತು ಕಪ್ಪು ಬಲೂನ್ ಗಳನ್ನ ಹಾರಿ ಬಿಡಲು ಕೆಲವು ಪುಢಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ನಾಡ ದ್ರೋಹಿಗಳಿಗೆ ಮಹಾರಾಷ್ಟ್ರ ಸರ್ಕಾರ ಕೂಡ ಬೆಂಬಲ ನೀಡುತ್ತಿದೆ.

ಇಂದು ಮಹಾರಾಷ್ಟ್ರದಲ್ಲಿನ ಸಚಿವರು ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ನಗರದಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒಡಗಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.

ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದೂಡಿಕೆ!!

ಬೆಂಗಳೂರು : ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ.

ಅವ್ವನ ಮಾತು ಎಚ್ಚರಿಕೆ ಗಂಟೆಯಿದ್ದಂತೆ

ಬದುಕಿನುದ್ದಕ್ಕೂ ಸದಾ ಅವ್ವ ನೆನಪಾಗುತ್ತಲೇ ಇರುತ್ತಾಳೆ. ಅವಳ ಮಾತು ಅಂದರೆ ವೇದ ವಾಕ್ಯವಿದ್ದಂತೆ. ಅದು ಸತ್ಯ ಅಂದರೆ ಸತ್ಯ ಅಷ್ಟೆ. ಏಕೆಂದರೆ ಸತ್ಯ ಯಾವತ್ತೂ ಸತ್ಯ! ಅದಕ್ಕೆ ಇನ್ನೊಂದು ಪರ್ಯಾಯವೇನೂ ಇರುವುದಿಲ್ಲ.

ರಾಯಚೂರು ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್!

ರಾಯಚೂರು: ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 434…