ದುಬೈ: ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಸೇರಿದಂತೆ ರಾಜ್ಯದ ಪ್ರತಿಭೆ ದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್, ಡೆಲ್ ಸ್ಟೇಯ್ನ್, ಶಾಬಾಜ್ ಅಹ್ಮದ್, ಉಮೇಶ್ ಯಾದವ್, ಶಿವಂ ದುಬೆ, ಯಜುವೇಂದ್ರ ಚಹಲ್, ಮಹಮದ್ ಸಿರಾಜ್, ಪವನ್ ದೇಶಪಾಂಡೆ ಕನ್ನಡಿಗರಿಗೆ ಶುಭಾಶಯ ತಿಳಿಸಿದ್ದಾರೆ.
ಅಲ್ಲದೇ, ಕನ್ನಡ ಭಾಷೆಯಲ್ಲಿಯೇ ಶುಭ ಕೋರುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಈ ವಿಶೇಷ ವಿಡಿಯೋವನ್ನು ಆರ್ ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾವಿರಾರು ಜನ ಕನ್ನಡಿಗರು ಮತ್ತು ಆರ್ ಸಿಬಿ ಅಭಿಮಾನಿಗಳು ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ.