ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಗುಡುಗಿದ ನಳೀನ್ ಕುಮಾರ್!

Siddaramayya ex cm

ಬಿಜೆಪಿಯವರ ತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಮಂಗಳೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ಬಿಜೆಪಿಯ ಎಲ್ಲ ಶಾಸಕರ ಪಾಡು ನಾಯಿಪಾಡಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ. 

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರು ಮೂಲೆಗುಂಪಾಗಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಈ ರೀತಿಯ ಮಾತುಗಳನ್ನು ಹೇಳುತ್ತಿದ್ದಾರೆ. ಒಬ್ಬ ಮಾಜಿ ಸಿಎಂ ಹಾಗೂ ಅನುಭವಿ ರಾಜಕಾರಣಿ, ಆದವರೂ ಈ ರೀತಿಯ ಮಾತುಗಳನ್ನು ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಾವು ನಿಶ್ಚಿತವಾಗಿಯೂ ಜಯ ಗಳಿಸಲಿದ್ದೇವೆ. ಆದರೂ ಈ ಫಲಿತಾಂಶದಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಗೆದ್ದ ನಂತರ ಮುನಿರತ್ನರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು. ಮಹದಾಯಿ ವಿಚಾರದಲ್ಲಿ ಗೋವಾದ ಪರವಾಗಿ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ, ಕಾಂಗ್ರೆಸ್ ನ ಇಬ್ಬಗೆಯ ನೀತಿಗೆ ಕಾರಣವಾಗಿದೆ ಎಂದು  ಹೇಳಿದ್ದಾರೆ.

Exit mobile version