ಚಿತ್ರದುರ್ಗ : ಅಪ್ರಾಪ್ತ ಬಾಲಕಿಯನ್ನು ವಿವಸ್ತ್ರಗೊಳಿಸಿ, ಬೆದರಿಸಿ, ವಿವಾಹವಾದ ಕುರಿತು ಕೂಡ ಚೆಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾಸ್ಕರ ಎಂಬ ಪಾಪಿಯಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಈ ಪ್ರಕರಣದ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಯುವಕನ ಪೋಷಕರು ಹಾಗೂ ಯುವತಿಯ ಪೋಷಕರ ಮೇಲೆ ಕೂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಚಳ್ಳಕೆರೆಯ ಭರಮ ಸಾಗರ ಎಂಬ ಗ್ರಾಮದಲ್ಲಿನ ಅಪ್ರಾಪ್ತ ಬಾಲಕಿ ಹೊಟ್ಟೆ ನೋವಿನಿಂದ ನರಳುತ್ತಿದ್ದಳು. ಹೀಗಾಗಿ ಮನೆಯವರು ಗ್ರಾಮದಲ್ಲಿನ ಶರಣಪ್ಪ ಎಂಬ ವ್ಯಕ್ತಿಯ  ಹತ್ತಿರ ತೆರಳಿದ್ದರು. ಈ ಯುವತಿಯನ್ನು ಶರಣಪ್ಪ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿದ್ದಾನೆ. ನಿನಗೆ ದೆವ್ವ ಹಿಡಿದಿದೆ. ಹೀಗಾಗಿ ನೀರು ಹಾಕಬೇಕು ಎಂದು ಹೇಳಿ ಬಟ್ಟೆ ಬಿಚ್ಚಿಸಿದ್ದಾರೆ. ಯುವತಿ ನಿರಾಕರಿಸಿದ್ದಾಳೆ. 

ಆಗ ಯುವತಿ ಪ್ರಜ್ಞೆ ತಪ್ಪುವಂತೆ ಮಾಡಿದ್ದಾರೆ. ಯುವತಿಯ ಮನೆಯ ಹತ್ತಿರ ಹೋಗಿ ತನ್ನ ಮೊಬೈಲ್ ನಲ್ಲಿದ್ದ ಯುವತಿಯ ನಗ್ನ ದೇಹದ ಫೋಟೋ ತೋರಿಸಿದ್ದಾನೆ. ನಾನು ಹೇಳಿದ ಹಾಗೆ ಕೇಳದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತೇನೆ ಎಂದು ಹೆದರಿಸಿದ್ದಾನೆ.

ಆ ನಂತರ ಯುವತಿಯನ್ನು ಪಾವಗಡ ತಾಲೂಕಿನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಬೆದರಿಸಿ ಮದುವೆಯಾಗಿದ್ದಾನೆ. ನಾನು ಈಗ ನಿನ್ನ ಮದುವೆಯಾಗಿದ್ದೇನೆ. ನೀನು, ನಾನು ಹೇಳಿದಂತೆ ಕೇಳಬೇಕು. ಇಲ್ಲವಾದರೆ, ನಿನ್ನ ಅಪ್ಪ , ಅಮ್ಮನನ್ನು ಮಾಟ, ಮಂತ್ರ ಮಾಡಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

Leave a Reply

Your email address will not be published. Required fields are marked *

You May Also Like

ರಾಜ್ಯದ ಬೊಕ್ಕಸಕ್ಕೆ ಭಾರಿ ಹೊಡೆತ!

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಇನ್ನೂ ಲಾಕ್ ಡೌನ್ ಮುಂದುವರೆದಿದೆ. ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ನಷ್ಟವಾಗಿದೆ.

ಮುಂಡರಗಿ: ರಸ್ತೆಯ ತುಂಬ ನೀರೋ.. ನೀರು..!

ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮುಂಟರಗಿ ಪಟ್ಟಣದಲ್ಲಿ ರಸ್ತೆಯ ತುಂಬೆಲ್ಲ ನೀರು ತುಂಬಿಕೊಂಡ ದೃಶ್ಯಗಳು ಸಾಮಾನ್ಯವಾಗಿದೆ.

ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281…

ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಿದ ಪೊಗರು ನಿರ್ದೇಶಕ!

ಇದು ಬೇಕಂತ ಒಂದು ಜನಾಂಗಕ್ಕೆ ಧಕ್ಕೆ ತರಲು ಮಾಡಿಲ್ಲ, ಇದೊಂದು ಕಾಲ್ಪನಿಕವಾದ ಕಥೆ, ತಿಳಿದೋ ತಿಳಿಯದೆಯೋ ಈ ರೀತಿ ಆಗಿದೆ, ನಿಮಗೆ ನೋವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದು ಕೈಮುಗಿದಿದ್ದಾರೆ ನಿರ್ದೇಶಕ ನಂದ ಕಿಶೋರ್.