ಚಿತ್ರದುರ್ಗ : ಅಪ್ರಾಪ್ತ ಬಾಲಕಿಯನ್ನು ವಿವಸ್ತ್ರಗೊಳಿಸಿ, ಬೆದರಿಸಿ, ವಿವಾಹವಾದ ಕುರಿತು ಕೂಡ ಚೆಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾಸ್ಕರ ಎಂಬ ಪಾಪಿಯಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಈ ಪ್ರಕರಣದ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಯುವಕನ ಪೋಷಕರು ಹಾಗೂ ಯುವತಿಯ ಪೋಷಕರ ಮೇಲೆ ಕೂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಚಳ್ಳಕೆರೆಯ ಭರಮ ಸಾಗರ ಎಂಬ ಗ್ರಾಮದಲ್ಲಿನ ಅಪ್ರಾಪ್ತ ಬಾಲಕಿ ಹೊಟ್ಟೆ ನೋವಿನಿಂದ ನರಳುತ್ತಿದ್ದಳು. ಹೀಗಾಗಿ ಮನೆಯವರು ಗ್ರಾಮದಲ್ಲಿನ ಶರಣಪ್ಪ ಎಂಬ ವ್ಯಕ್ತಿಯ  ಹತ್ತಿರ ತೆರಳಿದ್ದರು. ಈ ಯುವತಿಯನ್ನು ಶರಣಪ್ಪ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿದ್ದಾನೆ. ನಿನಗೆ ದೆವ್ವ ಹಿಡಿದಿದೆ. ಹೀಗಾಗಿ ನೀರು ಹಾಕಬೇಕು ಎಂದು ಹೇಳಿ ಬಟ್ಟೆ ಬಿಚ್ಚಿಸಿದ್ದಾರೆ. ಯುವತಿ ನಿರಾಕರಿಸಿದ್ದಾಳೆ. 

ಆಗ ಯುವತಿ ಪ್ರಜ್ಞೆ ತಪ್ಪುವಂತೆ ಮಾಡಿದ್ದಾರೆ. ಯುವತಿಯ ಮನೆಯ ಹತ್ತಿರ ಹೋಗಿ ತನ್ನ ಮೊಬೈಲ್ ನಲ್ಲಿದ್ದ ಯುವತಿಯ ನಗ್ನ ದೇಹದ ಫೋಟೋ ತೋರಿಸಿದ್ದಾನೆ. ನಾನು ಹೇಳಿದ ಹಾಗೆ ಕೇಳದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತೇನೆ ಎಂದು ಹೆದರಿಸಿದ್ದಾನೆ.

ಆ ನಂತರ ಯುವತಿಯನ್ನು ಪಾವಗಡ ತಾಲೂಕಿನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಬೆದರಿಸಿ ಮದುವೆಯಾಗಿದ್ದಾನೆ. ನಾನು ಈಗ ನಿನ್ನ ಮದುವೆಯಾಗಿದ್ದೇನೆ. ನೀನು, ನಾನು ಹೇಳಿದಂತೆ ಕೇಳಬೇಕು. ಇಲ್ಲವಾದರೆ, ನಿನ್ನ ಅಪ್ಪ , ಅಮ್ಮನನ್ನು ಮಾಟ, ಮಂತ್ರ ಮಾಡಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ವಾಹನ ಸವಾರರಿಗೆ ಆರ್ ಟಿ ಒ ಶಾಕ್..!

ವಾಹನದ ನಮಬರ್ ಪ್ಲೇಟ್ ಮೇಲೆ ನೋಂದಣಿ ಸಂಖ್ಯೆ ಬಿಟ್ಟು ಬೇರೆ ಏನೇ ಇದ್ದರು ಅಂತಹ ವಾಹನ ಸವಾರರ ಮೇಲೆ ಕ್ರಮ ಜರುಗುಸಲಾಗುವುದು ಎಂದು ಪ್ರದೇಶಿಕ ಸಾರಿಗೆ ಕಚೇರಿ (ಆರ್ ಟಿ ಒ) ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಈ ನಿಯಮ ಜಾರಿಗೆ ಬರಲಿದೆ.

ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.