ಮಂಡ್ಯ : ಮನೆಯವರ ನಿರಂತರ ದೌರ್ಜನ್ಯಕ್ಕೆ ಬೇಸತ್ತ ಸೊಸೆಯೊಬ್ಬರು ಪತಿ, ಮಾವ ಹಾಗೂ ಅತ್ತೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದಿದೆ.  ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಮೂವರನ್ನೂ ಕೊಲೆ ಮಾಡಿದ್ದಾರೆ. ಈ ಘಟನೆ ಒಂದು ವಾರದ ಹಿಂದೆಯೇ ನಡೆದಿದೆ. ಆದರೆ, ಗಾಯಾಳುಗಳು ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಹೆಮ್ಮಡಹಳ್ಳಿಯ ನಿವಾಸಿ, ಮಹಿಳೆಯ ಪತಿ ನಾಗರಾಜು (50), ಮಾವ ವೆಂಕಟೇಗೌಡ(70) ಹಾಗೂ  ಅತ್ತೆ ಕುಳ್ಳಮ್ಮ (60) ಕೊಲೆಯಾದವರು. ಆರೋಪಿತ ಮಹಿಳೆ ನಾಗಮಣಿ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಆಧಾರಿತ ಪಾಡ್ ಗೆ ಸುಧಾಕರ್ ಚಾಲನೆ

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್!

ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮುರುಡಿ ಗ್ರಾಮಕ್ಕೆ 93.33% ರಷ್ಟು ಫಲಿತಾಂಶ

ಉತ್ತರಪ್ರಭ ಮುಂಡರಗಿ: ತಾಲ್ಲೂಕಿನ ಮುರುಡಿಯ ಸರಕಾರಿ ಪ್ರೌಢ ಶಾಲೆಯ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ…