ಅಬುಧಾಬಿ : ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೊನೆಯ ಹಂತದಲ್ಲಿ ವೈಫಲ್ಯ ಅನುಭವಿಸಿತು. ಆದರೂ ಪ್ಲೇ ಆಫ್ ಹಂತ ತಲುಪಿದೆ. ಹೀಗಾಗಿ ಸದ್ಯ ಆರ್ ಸಿಬಿ ಕಪ್ ಗೆಲ್ಲುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಈ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾನ್, ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಗೆಲ್ಲುತ್ತದೆ ಎಂದು ಭಾವಿಸಬೇಡಿ ಎಂದು ಹೇಳಿದ್ದಾರೆ. ದೆಹಲಿ ತಂಡದ ವಿರುದ್ಧ ಆರ್ ಸಿಬಿ ತಂಡ ಹೀನಾಯವಾಗಿ ಸೋತಿದೆ. ಕಪ್ ಗೆಲ್ಲುವ ನೆಚ್ಚಿನ ತಂಡದಲ್ಲಿಯೂ ಆರ್ ಸಿಬಿ ಇದೆ. ಆದರೆ, ಮೈಕಲ್ ವಾನ್ ಅವರು ಮಾತ್ರ ಈ ಬಾರಿ ಆರ್ ಸಿಬಿ ಕಪ್ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ.

ನಾನು ಆರಂಭದಿಂದಲೂ ಹೇಳುತ್ತಿದ್ದೇನೆ ಬೆಂಗಳೂರು ತಂಡ ಈ ಬಾರಿ ಕಪ್ ಗೆಲ್ಲುವುದು ಅನುಮಾನ. ಟೂರ್ನಿಯುದ್ದಕ್ಕೂ ಆರ್‌ ಸಿಬಿ ಕಪ್ ಗೆಲ್ಲುವ ರೀತಿಯ ಪದರ್ಶನ ತೋರಿಲ್ಲ. ವಿರಾಟ್ ಕೊಹ್ಲಿಯವರು ಎಡಗೈನಲ್ಲಿ ಬ್ಯಾಟ್ ಮಾಡಿ ತಂಡವನ್ನು ಗೆಲ್ಲಿಸಬಹುದು. ಆದರೆ, ಅದು ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ.

ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ ಆರ್ ಸಿಬಿ, ಕೊನೆಯ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದರೂ ಆಡಿದ 14 ಪಂದ್ಯದಲ್ಲಿ 7 ಪಂದ್ಯಗಳನ್ನು ಗೆದ್ದು ನೆಟ್ ರನ್ ರೇಟ್ ಆಧಾರದ ಮೇಲೆ ಪ್ಲೇ ಆಫ್ ಗೆ ಆಯ್ಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಮೂರುಸಾವಿರಮಠ ಮತ್ತು ಆಸ್ತಿಗಳ ವಿಚಾರ: ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಶ್ರೀಗಳ ಆವ್ಹಾನ

ಶ್ರೀ ಜಗದ್ಗುರು ಮಾರುಸಾವಿರಮಠದ ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಪಟ್ಟ ವಿಚಾರವಾಗಿ ಹೇಳಿಕೆ ನೀಡುವ ಯಾವುದೇ ವ್ಯಕ್ತಿಗಳು ನಮ್ಮೊಂದಿಗೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ

ಬೆಂಗಳೂರು: ಲಾಕ್‌ಡೌನ್‌ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಗೊಳಿಸಿದೆ.…

ಮುಂದಿನ ವರ್ಷದಿಂದ ಅರ್ಜಿ ಪಡೆದು ರಾಜ್ಯೋತ್ಸವ ಪ್ರಶಸ್ತಿ ನೀಡುವುದಿಲ್ಲ…!

ಬೆಂಗಳೂರು: ಮುಂದಿನ  ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ: ಖಂಡನೆ

ಉತ್ತರಪ್ರಭ ಸುದ್ದಿಶಿರಹಟ್ಟಿ: ಜನೆವರಿ 26 ರಂದು ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು…