ಅಬುಧಾಬಿ : ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೊನೆಯ ಹಂತದಲ್ಲಿ ವೈಫಲ್ಯ ಅನುಭವಿಸಿತು. ಆದರೂ ಪ್ಲೇ ಆಫ್ ಹಂತ ತಲುಪಿದೆ. ಹೀಗಾಗಿ ಸದ್ಯ ಆರ್ ಸಿಬಿ ಕಪ್ ಗೆಲ್ಲುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಈ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾನ್, ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಗೆಲ್ಲುತ್ತದೆ ಎಂದು ಭಾವಿಸಬೇಡಿ ಎಂದು ಹೇಳಿದ್ದಾರೆ. ದೆಹಲಿ ತಂಡದ ವಿರುದ್ಧ ಆರ್ ಸಿಬಿ ತಂಡ ಹೀನಾಯವಾಗಿ ಸೋತಿದೆ. ಕಪ್ ಗೆಲ್ಲುವ ನೆಚ್ಚಿನ ತಂಡದಲ್ಲಿಯೂ ಆರ್ ಸಿಬಿ ಇದೆ. ಆದರೆ, ಮೈಕಲ್ ವಾನ್ ಅವರು ಮಾತ್ರ ಈ ಬಾರಿ ಆರ್ ಸಿಬಿ ಕಪ್ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ.

ನಾನು ಆರಂಭದಿಂದಲೂ ಹೇಳುತ್ತಿದ್ದೇನೆ ಬೆಂಗಳೂರು ತಂಡ ಈ ಬಾರಿ ಕಪ್ ಗೆಲ್ಲುವುದು ಅನುಮಾನ. ಟೂರ್ನಿಯುದ್ದಕ್ಕೂ ಆರ್‌ ಸಿಬಿ ಕಪ್ ಗೆಲ್ಲುವ ರೀತಿಯ ಪದರ್ಶನ ತೋರಿಲ್ಲ. ವಿರಾಟ್ ಕೊಹ್ಲಿಯವರು ಎಡಗೈನಲ್ಲಿ ಬ್ಯಾಟ್ ಮಾಡಿ ತಂಡವನ್ನು ಗೆಲ್ಲಿಸಬಹುದು. ಆದರೆ, ಅದು ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ.

ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ ಆರ್ ಸಿಬಿ, ಕೊನೆಯ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದರೂ ಆಡಿದ 14 ಪಂದ್ಯದಲ್ಲಿ 7 ಪಂದ್ಯಗಳನ್ನು ಗೆದ್ದು ನೆಟ್ ರನ್ ರೇಟ್ ಆಧಾರದ ಮೇಲೆ ಪ್ಲೇ ಆಫ್ ಗೆ ಆಯ್ಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ

ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…

ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…