ಬೆಂಗಳೂರು : ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ಜೋಗಿ ಪ್ರೇಮ್ ದಂಪತಿಯ ಮಗ ಸೂರ್ಯ 12ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾನೆ. ಹೀಗಾಗಿ ಮಗನ ಹುಟ್ಟು ಹಬ್ಬಕ್ಕೆ ತಾಯಿ ರಕ್ಷಿತಾ ತಮ್ಮ ಇನ್‍ ಸ್ಟಾಗ್ರಾಮ್ ಮೂಲಕ ಶುಭಾಶಯ ತಿಳಿಸಿದ್ದಾರೆ.

ನೀನು 12ನೇ ವರ್ಷಕ್ಕೆ ಕಾಲಿಡುತ್ತಿರುವುದು ನನಗೆ ತುಂಬಾ ಸಂತಸ ತಂದಿದೆ. ನನಗೆ ತಿಳಿದಿರುವಂತೆ ಅರ್ಥ ಮಾಡಿಕೊಂಡು ಸಹಾಯದ ಗುಣ ಹೊಂದಿರುವ ಪ್ರೀತಿಯ ಮಗು ನೀನು. ನಿನಗೆ ನಾನು ಬೆಂಬಲವಾಗಿರಬೇಕು. ಆದರೆ 12 ವರ್ಷದ ನೀನು ನನಗೆ ತೋರಿಸಿದ ಬೆಂಬಲ, ಯಾರು ದೊಡ್ಡವರು ಎಂಬುವುದನ್ನು ಆಲೋಚಿಸುವಂತೆ ಮಾಡಿದೆ.

ನಾನು ಯಾವಾಗಲೂ ನಿನ್ನಲ್ಲಿ ಒಬ್ಬ ಸ್ನೇಹಿತನನ್ನು ನೋಡಿದ್ದೇನೆ. ನನ್ನ ಜೀವನದ ಈ ಜರ್ನಿಯಲ್ಲಿ ತುಂಬಾ ಸಂತೋಷ ಕೊಟ್ಟಿದ್ದೀಯಾ. ಮೂಕಂಬಿಕಾ ನನಗೆ ನೀಡಿರುವ ಅತ್ಯುತ್ತಮ ಉಡುಗೊರೆ ನೀನು ಎಂದು ಭಾವುಕರಾಗಿ ನುಡಿದಿದ್ದಾರೆ.

ನೀನ್ನಿಂದಾಗಿಯೇ ನನ್ನ ಮುಖದ ಮೇಲೆ ನಗು ಮೂಡಿದೆ. ಸಂತೋಷ, ಆರೋಗ್ಯ, ಪ್ರೀತಿ ಎಲ್ಲವೂ ನಿನಗೆ ಸಿಗಲಿ. ಹುಟ್ಟು ಹಬ್ಬದ ಸುಭಾಶಯ ಎಂದು ರಕ್ಷಿತಾ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ

ಕನ್ನಡ ಚಿತ್ರ ರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ನಿಧನ!

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಹುಡುಗಿ :ಟಿವಿ ಶೋ ಮಾಡುತ್ತಲೇ ಶೇ.74 ಸ್ಕೋರ್

ಸದ್ಯ ಜನಪ್ರಿಯವಾಗಿರುವ ಅಲಾದ್ದೀನ್ ಫ್ಯಾಂಟಸಿ ಟಿವಿ ಶೋನಲ್ಲಿ ಪಾತ್ರ ಮಾಡುತ್ತಿರುವ ಈ ಹುಡುಗಿ ಶೂಟಿಂಗ್ ಮತ್ತು ಸ್ಟಡಿ ನಡುವೆ ಬ್ಯಾಲೆನ್ಸ್ ಮಾಡುತ್ತ ಗೆಲ್ಲುತ್ತಿದ್ದಾಳೆ.

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.