ಬೆಂಗಳೂರು : ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ಜೋಗಿ ಪ್ರೇಮ್ ದಂಪತಿಯ ಮಗ ಸೂರ್ಯ 12ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾನೆ. ಹೀಗಾಗಿ ಮಗನ ಹುಟ್ಟು ಹಬ್ಬಕ್ಕೆ ತಾಯಿ ರಕ್ಷಿತಾ ತಮ್ಮ ಇನ್‍ ಸ್ಟಾಗ್ರಾಮ್ ಮೂಲಕ ಶುಭಾಶಯ ತಿಳಿಸಿದ್ದಾರೆ.

ನೀನು 12ನೇ ವರ್ಷಕ್ಕೆ ಕಾಲಿಡುತ್ತಿರುವುದು ನನಗೆ ತುಂಬಾ ಸಂತಸ ತಂದಿದೆ. ನನಗೆ ತಿಳಿದಿರುವಂತೆ ಅರ್ಥ ಮಾಡಿಕೊಂಡು ಸಹಾಯದ ಗುಣ ಹೊಂದಿರುವ ಪ್ರೀತಿಯ ಮಗು ನೀನು. ನಿನಗೆ ನಾನು ಬೆಂಬಲವಾಗಿರಬೇಕು. ಆದರೆ 12 ವರ್ಷದ ನೀನು ನನಗೆ ತೋರಿಸಿದ ಬೆಂಬಲ, ಯಾರು ದೊಡ್ಡವರು ಎಂಬುವುದನ್ನು ಆಲೋಚಿಸುವಂತೆ ಮಾಡಿದೆ.

ನಾನು ಯಾವಾಗಲೂ ನಿನ್ನಲ್ಲಿ ಒಬ್ಬ ಸ್ನೇಹಿತನನ್ನು ನೋಡಿದ್ದೇನೆ. ನನ್ನ ಜೀವನದ ಈ ಜರ್ನಿಯಲ್ಲಿ ತುಂಬಾ ಸಂತೋಷ ಕೊಟ್ಟಿದ್ದೀಯಾ. ಮೂಕಂಬಿಕಾ ನನಗೆ ನೀಡಿರುವ ಅತ್ಯುತ್ತಮ ಉಡುಗೊರೆ ನೀನು ಎಂದು ಭಾವುಕರಾಗಿ ನುಡಿದಿದ್ದಾರೆ.

ನೀನ್ನಿಂದಾಗಿಯೇ ನನ್ನ ಮುಖದ ಮೇಲೆ ನಗು ಮೂಡಿದೆ. ಸಂತೋಷ, ಆರೋಗ್ಯ, ಪ್ರೀತಿ ಎಲ್ಲವೂ ನಿನಗೆ ಸಿಗಲಿ. ಹುಟ್ಟು ಹಬ್ಬದ ಸುಭಾಶಯ ಎಂದು ರಕ್ಷಿತಾ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?

ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನು ಬರೆದುಕೊಡ್ತಿದ್ದೆ ಅಂತ ನಟ ಶಿವಣ್ಣ ಹೇಳಿದ್ದು ಯಾಕೆ?

ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡುವಾಗೆಲ್ಲಾ ಹೊಟ್ಟೆ ಉರಿಯುತ್ತೆ. ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಪಡಿಸಿಕೊಳ್ಳೋಕೆ ಆಗುತ್ತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ. ರೈತರಿಗೆ ನಮ್ಮ ಬೆಂಬಲ ಖಂಡಿತಾ ಇದ್ದೇ ಇರುತ್ತೆ. ಆದರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡುತ್ತಿದ್ದೆ. ಆದ್ರೆ ಅಧಿಕಾರ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳ್ಳಿ ತೆರೆಯ ಕಾರ್ಮಿಕರಿಗೆ ವಿಶೇಷ ಕೊಡುಗೆ!

ಬೆಳ್ಳೆ ತೆರೆಯ ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರ ತಂಡ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.