ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಜಾಗೊಂಡಿದೆ.

ಇಂದು ಹೈಕೋರ್ಟ್ ನಟಿಯರಿಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಬಂಧಿತ ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.

ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆ. 4ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಅವರ ಮೇಲೆ ದಾಳಿ ನಡೆಸಿದ್ದರು. ಅಂದೇ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅವರ ವಿಚಾರಣೆ ನಡೆಸಿತ್ತು. ಎನ್‍ ಡಿಪಿಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಟಿಯನ್ನು ಪರಪ್ಪನ ಅಗ್ರಹಾರದಲ್ಲಿರಿಸಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿಯೇ ವಿಚಾರಣೆ ನಡೆಸಿತ್ತು.

ಇಬ್ಬರು ನಟಿಯರ ಮೇಲೆ ಸಾಕ್ಷ್ಯ ನಾಶದ ಆರೋಪ ಕೇಳಿ ಬಂದಿವೆ. ಹೀಗಾಗಿ ರಾಗಿಣಿ, ಸಂಜನಾಗೆ ಜಾಮೀನು ಕೊಡಬಾರದು. ಪ್ರಕರಣದ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಜಾಮೀನು ಕೊಟ್ಟರೆ ಇಬ್ಬರು ಪ್ರಭಾವಿಗಳಾಗಿದ್ದರಿಂದ ಪ್ರಕರಣದ ಪ್ರಭಾವ ಬೀರುವ ಸಾಧ್ಯತೆಗಳಿವೆ ಎಂದು ಸಿಸಿಬಿ ಪರ ವಕೀಲರು ವಾದ ಮಂಡಿಸಿದ್ದರು.

ಡ್ರಗ್ ಕೇಸ್ ನಲ್ಲಿ ರಾಗಿಣಿ ಅಮಾಯಕಿ. ನಮ್ಮ ಕಕ್ಷಿದಾರರ ವಿರುದ್ಧ ಅನಗತ್ಯ ಆರೋಪಗಳನ್ನ ಮಾಡಲಾಗಿದೆ. ಸಿಸಿಬಿ ಪೊಲೀಸರ ದಾಳಿ ವೇಳೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ಅವರ ಪರ ವಕೀಲ ವಾದಿಸಿದ್ದರು.

Leave a Reply

Your email address will not be published. Required fields are marked *

You May Also Like

ನೆಕೆಡ್ ಚಿತ್ರ 27ರಂದು ತೆರೆಗೆ ಬರಲಿದೆ: ಮಾದಕ ಫೋಟೋ ಹಂಚಿಕೊಂಡ RGV

ಮುಂಬೈ: ಬಾಲಿವುಡ್ ನ ಪ್ರತಿಭಾವಂತ ಮತ್ತು ಅನೇಕ ಕಾರಣಗಳಿಂದ ವಿವಾದದ ಸುಳಿಗೆ ಸಿಲುಕುವ ನಿರ್ದೇಶಕ ರಾಮ್…

ಸಿನಿಪ್ರಿಯರಿಗೆ ಸಿಹಿ ಸುದ್ದಿ; ಯೂಟ್ಯೂಬ್‌ನಲ್ಲಿ 10 ದಿನಗಳ ಜಾಗತಿಕ ಸಿನಿ ಉತ್ಸವ

ಯೂಟ್ಯೂಬ್ 10 ದಿನಗಳ ಕಾಲ ಸಿನಿ ಉತ್ಸವ ಆಯೋಜಿಸುವ ಮೂಲಕ ಸಿನಿ ಪ್ರೀಯರಿಗೆ ಸಿಹಿ ಸುದ್ದಿ ನೀಡಿರುವ ಜೊತೆಗೆ ಉತ್ಸವದ ಜಾಹಿರಾತಿನಿಂದ ಬಂದ ಲಾಭವನ್ನು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್‌ 19 ಸಾಲಿಡಾರಿಟಿ ರೆಸ್ಪಾನ್ಸ್‌ ಫಂಡ್‌ಗೆ ನೀಡುವುದಾಗಿ ಯೂಟ್ಯೂಬ್‌ ತಿಳಿಸಿದೆ.

ಶೂಟಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅಲ್ಲು ಅರ್ಜುನ್ ಕಾರ್ ಗೆ ಅಪಘಾತ!

ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ.

ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ

ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..