ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 80 ಸಾವಿರ ಜನ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಶೇ. 11ರಷ್ಟು ಜನ ವೈರಸ್ ಗೆ ತುತ್ತಾಗಿದ್ದರು. ನ. 2ರ ವರೆಗೂ 9,348 ಪೊಲೀಸರಿಗೆ ಸೋಂಕು ತಗುಲಿದ್ದು, ಇದರಲ್ಲಿ ಈಗಾಗಲೇ 8,052 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

ಬೆಂಗಳೂರು ನಗರದಲ್ಲಿ ಇಲ್ಲಿಯವರೆಗೆ 2,904 ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ ಇಲ್ಲಿಯವರೆಗೆ 2,432 ಜನ ಚೇತರಿಸಿಕೊಂಡಿದ್ದಾರೆ. ಅಲ್ಲದೆ, 31 ಸಿಬ್ಬಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 

ಈ ನಡುವೆ ಕರ್ತವ್ಯದ ವೇಳೆ ಸೋಂಕು ತಗುಲಿ ಮೃತಪಟ್ಟಿರುವ 84 ಜನ ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ರೂ. 30 ಲಕ್ಷ ಪರಿಹಾರ ನೀಡಲಾಗಿದೆ. ಮೂವರು ಪೊಲೀಸರು ಇತ್ತೀಚೆಗಷ್ಟೇ ಸಾವನ್ನಪ್ಪಿದ್ದು, ಮೃತ ಪೊಲೀಸರ ಕುಟುಂಬಸ್ಥರಿಗೂ ಶೀಘ್ರದಲ್ಲಿಯೇ ಪರಿಹಾರ ನೀಡಲಾಗುತ್ತದೆ. ಇದಲ್ಲದೆ, ಮೃತ ಪೊಲೀಸರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ಪೊಲೀಸರಿಗೂ ಸೋಂಕು ತಗುಲುವ ಸಂಖ್ಯೆ ಕಡಿಮೆಯಾಗುತ್ತಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಪ್ರತಿ ನಿತ್ಯ 20 ರಿಂದ 30 ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಆದರೆ, ಈ ಸಂಖ್ಯೆ ಒಂದಂಕಿಗೆ ಬಂದು ನಿಂತಿದೆ.

Leave a Reply

Your email address will not be published. Required fields are marked *

You May Also Like

ವೃತ್ತಕ್ಕೆ ದಿ. ಆರ್.ಎನ್.ದೇಶಪಾಂಡೆ ನಾಮಕರಣಕ್ಕೆ ಮನವಿ

ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…

ಹದಗೆಟ್ಟ ಸೊರಟೂರ – ಮುಳಗುಂದ ರಸ್ತೆ: ದಶಕ ಗತಿಸಿದರೂ ದುರಸ್ಥಿ ಭಾಗ್ಯ ಕಾಣದ ರಸ್ತೆ!

ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.

ಮದ್ಯಕ್ಕೆ ಕೊಡುವ ಪ್ರೋತ್ಸಾಹ ವಿದ್ಯೆಗೆ ನೀಡಿ- ಗುರುಶಾಂತ ಸ್ವಾಮೀಜಿ

ವರದಿ: ಗುಲಾಬಚಂದ ಜಾಧವ ಆಲಮಟ್ಟಿ : ಬಹಳಷ್ಟು ಯುವಕರ ಮನಸ್ಥಿತಿಯಿಂದು ಕೆಟ್ಟು ಹೋಗುತ್ತಲ್ಲಿದೆ. ದುಷ್ಚಟಗಳ ದಾಸರಾಗಿ…