ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 80 ಸಾವಿರ ಜನ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಶೇ. 11ರಷ್ಟು ಜನ ವೈರಸ್ ಗೆ ತುತ್ತಾಗಿದ್ದರು. ನ. 2ರ ವರೆಗೂ 9,348 ಪೊಲೀಸರಿಗೆ ಸೋಂಕು ತಗುಲಿದ್ದು, ಇದರಲ್ಲಿ ಈಗಾಗಲೇ 8,052 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

ಬೆಂಗಳೂರು ನಗರದಲ್ಲಿ ಇಲ್ಲಿಯವರೆಗೆ 2,904 ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ ಇಲ್ಲಿಯವರೆಗೆ 2,432 ಜನ ಚೇತರಿಸಿಕೊಂಡಿದ್ದಾರೆ. ಅಲ್ಲದೆ, 31 ಸಿಬ್ಬಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 

ಈ ನಡುವೆ ಕರ್ತವ್ಯದ ವೇಳೆ ಸೋಂಕು ತಗುಲಿ ಮೃತಪಟ್ಟಿರುವ 84 ಜನ ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ರೂ. 30 ಲಕ್ಷ ಪರಿಹಾರ ನೀಡಲಾಗಿದೆ. ಮೂವರು ಪೊಲೀಸರು ಇತ್ತೀಚೆಗಷ್ಟೇ ಸಾವನ್ನಪ್ಪಿದ್ದು, ಮೃತ ಪೊಲೀಸರ ಕುಟುಂಬಸ್ಥರಿಗೂ ಶೀಘ್ರದಲ್ಲಿಯೇ ಪರಿಹಾರ ನೀಡಲಾಗುತ್ತದೆ. ಇದಲ್ಲದೆ, ಮೃತ ಪೊಲೀಸರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ಪೊಲೀಸರಿಗೂ ಸೋಂಕು ತಗುಲುವ ಸಂಖ್ಯೆ ಕಡಿಮೆಯಾಗುತ್ತಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಪ್ರತಿ ನಿತ್ಯ 20 ರಿಂದ 30 ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಆದರೆ, ಈ ಸಂಖ್ಯೆ ಒಂದಂಕಿಗೆ ಬಂದು ನಿಂತಿದೆ.

Leave a Reply

Your email address will not be published. Required fields are marked *

You May Also Like

ಚೀನಾ – ಭಾರತೀಯ ಸೈನಿಕರ ನಡುವೆ ಸಂಘರ್ಷ – 76 ಸೈನಿಕರಿಗೆ ಗಾಯ!

ಹೊಸದೆಹಲಿ: ಲಡಾಖ್‌ನ ಗಲ್ವಾನ್‌ ಕಣಿವೆ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಕಾಳಗದಲ್ಲಿ 76…

ಇನ್ಮುಂದೆ ಪೊಲೀ‍‍ಸರಿಗೆ ವಾರದ ರಜೆ ಕಡ್ಡಾಯ

ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ. ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.

ಶೌರ್ಯ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ: ಸಿಎಂ ಘೋಷಣೆ

vijaya diwas

ಶಿಗ್ಲಿ ಗ್ರಾಮ ಪಂಚಾಯತ ಉಪಚುನಾವಣೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೈಲಾ ಜಯಗಳಿಸಿದ್ದಾರೆ

ಲಕ್ಷ್ಮೇಶ್ವರ:ತಾಲೂಕಿನ ಶಿಗ್ಲಿ ಗ್ರಾಮಪಂಚಾಯತ 4 ನೇ ವಾರ್ಡ್ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೈಲಾ,…