ಬೆಂಗಳೂರು: 2021-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ನಡೆಸಲಾಗುತ್ತಿದೆ.

ಈ ಪ್ರಕ್ರಿಯೇಯನ್ನು ಪ್ರಾರಂಭಿಸಲು ಪೂರ್ವಭಾವಿಯಾಗಿ ಶಿಕ್ಷಕರ ವರ್ಗಾವಣೆ ತಂತ್ರಾಂಶದ ಪ್ರಾತ್ಯೆಕ್ಷಿಕೆ, ಶಾಲೆಗಳಲ್ಲಿ ಹುದ್ದೆಗಳ ಮಂಜೂರಾತಿ ವಿವರ, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮಾಹಿತಿ ಹಾಗೂ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮಾಹಿತಿ ಪರಿಶೀಲನೆ, ಮತ್ತು ಶಿಕ್ಷಕರ ಸೇವಾ ವಿವರ ಪರಿಶೀಲಿಸಿ ದೃಢಿಕರಿಸುವ ಬಗ್ಗೆ ಡಿಡಿಒ ಅವರಿಂದ ಮಾಹಿತಿ ಪಡೆಯುವ ಕುರಿತು ಆನ್ ಲೈನ್ ಮೂಲಕ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿದೆ.

ಸಭೆಯ ವೇಳಾಪಟ್ಟಿ

ಬೆಂಗಳೂರು ವಿಭಾಗದಲ್ಲಿ 03-11-2020 ರಂದು ಮದ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ. ಮೈಸೂರು ವಿಭಾಗ 04-11-2020 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆವರೆಗೆ ಬೆಳಗಾವಿ ವಿಭಾಗ 04-11-2020 ರಂದು ಮದ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ಹಾಗೂ ಕಲಬುರಗಿ ವಿಭಾಗ 05-11-2020 ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಉರ್ದು ಮತ್ತು ಭಾಷಾ ಅಲ್ಪಸಂಖ್ಯಾತ ಶಾಲೆಗಳ ನಿರ್ದೇಶನಾಲಯದ ನಿರ್ದೇಶಕರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

You May Also Like

ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಸೀಮಸಾಹೇಬ್ ಹುಸೇನಸಾಹೇಬ

ಉತ್ತರಪ್ರಭನಿಡಗುಂದಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87)…

ಗದಗ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆ ವಿವರ

ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿನ ಒಟ್ಟು 6004 ಗ್ರಾಮ ಪಂಚಾಯತಿಗಳಲ್ಲಿ ಅವಧಿ ಮುಕ್ತಾಯವಾಗದ 162 ಗ್ರಾಮ ಪಂಚಾಯತಿಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ 6 ಗ್ರಾಮ ಪಂಚಾಯತಿಗಳು ಮತ್ತು 33 ಗ್ರಾಮ ಪಂಚಾಯತಿಗಳು ಪೂರ್ಣವಾಗಿ ಹಾಗೂ 41 ಗ್ರಾಮ ಪಂಚಾಯತಿಗಳು ಬಹುಶಃ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವುದರಿಂದ ಒಟ್ಟು 74 ಗ್ರಾಮ ಪಂಚಾಯತಿಗಳು ಒಟ್ಟಾರೆ 242 ಗ್ರಾಮ ಪಂಚಾಯತಿಗಳನ್ನು ಹೊರತು ಪಡೆಸಿ ಉಳಿದ ಎಲ್ಲ 5762 ಗ್ರಾಮ ಪಂಚಾಯತಿಗಳ 35,884 ಕ್ಷೇತ್ರಗಳಿಂದ ಒಟ್ಟು 92121 ಸ್ಥಾನಗಳಿಗೆ ಈ ಕೆಳಕಂಡ ವೇಳಾ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು.

ಕನ್ನಡ ನಾಡು ನುಡಿಗೆ ಜಕ್ಕಲಿ ಗ್ರಾಮದ ಕೊಡುಗೆ ಅಪಾರ :ವಿವೇಕಾನಂದಗೌಡ ಪಾಟೀಲ

ಉತ್ತರಪ್ರಭ ಸುದ್ದಿ ನರೆಗಲ್ಲ: ಕನ್ನಡ ನಾಡು ನುಡಿಗೆ ಗದಗ ಜಿಲ್ಲೆಯ ಜಕ್ಕಲಿ ಗ್ರಾಮ ಅಪಾರವಾದ ಕೊಡುಗೆ…