ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಎಚ್.ಡಿ. ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿ ಕೆರೆಯಲ್ಲಿ ನಡೆದಿದೆ. ಪ್ರಸನ್ನ (25) ಮತ್ತು ನಿಂಗರಾಜು (35) ಮೃತ ದುರ್ದೈವಿಗಳು.
ತಂದೆ ಜೊತೆ ಜಗಳ ಮಾಡಿಕೊಂಡಿದ್ದ ಪ್ರಸನ್ನ ಕೆರೆಗೆ ಹಾರಿದ್ದ. ಬಾಮೈದ ಪ್ರಸನ್ನ ಆತ್ಮಹತ್ಯೆಗೆ ಯತ್ನಸಿದ್ದನ್ನು ಕಂಡ ಬಾಮೈದ ನಿಂಗರಾಜು ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತರ ದೇಹವನ್ನು ಹೊರ ತೆಗೆಯಲಾಗಿದೆ. ಈ ಕುರಿತು ಎಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.