ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಎಚ್.ಡಿ. ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿ ಕೆರೆಯಲ್ಲಿ ನಡೆದಿದೆ. ಪ್ರಸನ್ನ (25) ಮತ್ತು ನಿಂಗರಾಜು (35) ಮೃತ ದುರ್ದೈವಿಗಳು. 

ತಂದೆ ಜೊತೆ ಜಗಳ ಮಾಡಿಕೊಂಡಿದ್ದ ಪ್ರಸನ್ನ ಕೆರೆಗೆ ಹಾರಿದ್ದ. ಬಾಮೈದ ಪ್ರಸನ್ನ ಆತ್ಮಹತ್ಯೆಗೆ ಯತ್ನಸಿದ್ದನ್ನು ಕಂಡ ಬಾಮೈದ ನಿಂಗರಾಜು ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಸದ್ಯ ಮೃತರ ದೇಹವನ್ನು ಹೊರ ತೆಗೆಯಲಾಗಿದೆ. ಈ ಕುರಿತು ಎಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ ದತ್ತ ಮೇಷ್ಟ್ರು..!

ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ.

ಕುರುಬರಿಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು – ಈಶ್ವರಪ್ಪ!

ನೆಲಮಂಗಲ : ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಳಗಾವಿ : ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.