ಬೆಂಗಳೂರು :  ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.

 ಬೆಳಿಗ್ಗೆ 7ರಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಕೊರೊನಾ ಸಮಯದಲ್ಲಿಯೇ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಸ್ಪರ್ಧಿಸಿದ್ದು, ಮೂವರ ನಡುವೆಯೂ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ಗೌಗಡ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ. ಶಿರಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 330 ಮತಗಟ್ಟೆಗಳಿವೆ. 

ಶಿರಾದಲ್ಲಿ 2,15,725 ಜನ ಮತದಾರರು ಇದ್ದಾರೆ. ಆರ್.ಆರ್. ನಗರದಲ್ಲಿ 4,62,000 ಸಾವಿರ ಮತದಾರರು ಇದ್ದಾರೆ. 

Leave a Reply

Your email address will not be published. Required fields are marked *

You May Also Like

ಬೆಳಗಾವಿಯಲ್ಲಿ ಕೊಳಚೆ ಕಲ್ಲಿನ ರಾಜಕಾರಣದ ರಹಸ್ಯೆವೇನು?: ಹೆಬ್ಬಾಳ್ಕರ್-ಜಾರಕಿಹೊಳಿ ಚಾಲೇಂಜಿಂಗ್ ಪಾಲಿಟಿಕ್ಸ್..!

ಬೆಳಗಾವಿ: ಕುಂದಾ ನಗರಿಯಲ್ಲೀಗ ಕೊಳಚೆ ಕಲ್ಲಿನ ರಾಜಕಾರಣದ್ದೆ ಸುದ್ದಿ ಸದ್ದು ಮಾಡ್ತಿದೆ. ಮತ್ತೆ ಸಚಿವ ರಮೇಶ್…

ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ

ಪಟ್ಟಣದ ಅದಿ ದೇವತೆ ಶ್ರೀ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ ಫೆ.10 ರಂದು ನಡೆಯಲಿದೆ.

ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ಬಿಗ್ ರಿಲೀಫ್

ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ತಮ್ಮ ಅಭ್ಯರ್ಥಿಗಳು ಗೆಲ್ಲಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.