ಚೆನ್ನೈ : ಆನ್ ಲೈನ್ ಜೂಜಾಟದಿಂದಾಗಿ ಸದ್ಯ ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾಂಬ್ಲಿಂಗ್ ಅನ್ನು ಉತ್ತೇಜಿಸುತ್ತಿರುವ ಜಾಹಿರಾತುಗಳಲ್ಲಿ ನಟಿಸಿರುವ ಸೆಲೆಬ್ರಿಟಿಗಳಿಗೆ ನೊಟೀಸ್ ನೀಡಲಾಗಿದೆ.  

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್  ತಂಡದ ನಾಯಕ ವಿರಾಟ್ ಕೊಹ್ಲಿ, ನಟ ಪ್ರಕಾಶ್ ರಾಜ್, ರಾಣಾ ಮತ್ತು ತಮನ್ನಾ ಭಾಟಿಯಾಗೆ ಮದ್ರಾಸ್ ಹೈಕೋರ್ಟ್ ನೊಟೀಸ್ ನೀಡಿದೆ.

ಅಲ್ಲದೇ, ನ. 19ರೊಳಗೆ ಉತ್ತರಿಸುವಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಜೂಜಾಟದಿಂದಾಗಿ ಸಾಲ ಹೆಚ್ಚಾಗಿ 9 ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚೆನ್ನೈ ಮೂಲದ ವ್ಯಕ್ತಿ, ಆನ್‌ ಲೈನ್‌ ಜೂಜಾಟದಿಂದ ಯುವಕರು ದಾರಿ ತಪ್ಪುತ್ತಿದ್ದಾರೆ. ಈ ಕಾರಣದಿಂದ ಇಂತಹ ಆಪ್‌ಗಳನ್ನು ರದ್ದು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.

ಯುವಕರನ್ನು ಮನಸ್ಸನ್ನು ಆನ್‌ ಲೈನ್‌ ಜೂಜಾಟಕ್ಕೆ ಸೆಳೆಯಲು ಕ್ರಿಕೆಟ್ ಖ್ಯಾತನಾಮ ಹಾಗೂ ನಟ, ನಟಿಯರು ಬಳಕೆಯಾಗುತ್ತಿದ್ದಾರೆ ಎಂದು ಹೇಳಿದ್ದರು. 

Leave a Reply

Your email address will not be published. Required fields are marked *

You May Also Like

ಕೋಲ್ಕತ್ತಾ ನೈಟ್ ರೈಡರ್ಸ್ ಗೆ ಸುಲಭ ಮೊತ್ತದ ಗುರಿ ನೀಡಿದ ಹೈದರಾಬಾದ್!

ಶಾರ್ಜಾ : ಮನೀಶ್ ಪಾಂಡೆ ಅವರ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತಾ…

ಸೋಲಿನ ಸುಳಿಗೆ ಸಿಲುಕಿದ ಧೋನಿ ವಿರುದ್ಧ ಟೀಕೆಗಳ ಮಹಾಪೂರ!

ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನ ತೋರುತ್ತಿರುವುದಕ್ಕೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಚಟುವಟಿಕೆ ಉದ್ಘಾಟನೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ…

ಹರ್ಭಜನ್ ಸಿಂಗ್ ವಿರುದ್ಧ ಚೆನ್ನೈ ಅಭಿಮಾನಿಗಳೇಕೆ ಕಿಡಿ ಕಾರುತ್ತಿದ್ದಾರೆ?

ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.