ಚೆನ್ನೈ : ಆನ್ ಲೈನ್ ಜೂಜಾಟದಿಂದಾಗಿ ಸದ್ಯ ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾಂಬ್ಲಿಂಗ್ ಅನ್ನು ಉತ್ತೇಜಿಸುತ್ತಿರುವ ಜಾಹಿರಾತುಗಳಲ್ಲಿ ನಟಿಸಿರುವ ಸೆಲೆಬ್ರಿಟಿಗಳಿಗೆ ನೊಟೀಸ್ ನೀಡಲಾಗಿದೆ.  

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್  ತಂಡದ ನಾಯಕ ವಿರಾಟ್ ಕೊಹ್ಲಿ, ನಟ ಪ್ರಕಾಶ್ ರಾಜ್, ರಾಣಾ ಮತ್ತು ತಮನ್ನಾ ಭಾಟಿಯಾಗೆ ಮದ್ರಾಸ್ ಹೈಕೋರ್ಟ್ ನೊಟೀಸ್ ನೀಡಿದೆ.

ಅಲ್ಲದೇ, ನ. 19ರೊಳಗೆ ಉತ್ತರಿಸುವಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಜೂಜಾಟದಿಂದಾಗಿ ಸಾಲ ಹೆಚ್ಚಾಗಿ 9 ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚೆನ್ನೈ ಮೂಲದ ವ್ಯಕ್ತಿ, ಆನ್‌ ಲೈನ್‌ ಜೂಜಾಟದಿಂದ ಯುವಕರು ದಾರಿ ತಪ್ಪುತ್ತಿದ್ದಾರೆ. ಈ ಕಾರಣದಿಂದ ಇಂತಹ ಆಪ್‌ಗಳನ್ನು ರದ್ದು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.

ಯುವಕರನ್ನು ಮನಸ್ಸನ್ನು ಆನ್‌ ಲೈನ್‌ ಜೂಜಾಟಕ್ಕೆ ಸೆಳೆಯಲು ಕ್ರಿಕೆಟ್ ಖ್ಯಾತನಾಮ ಹಾಗೂ ನಟ, ನಟಿಯರು ಬಳಕೆಯಾಗುತ್ತಿದ್ದಾರೆ ಎಂದು ಹೇಳಿದ್ದರು. 

Leave a Reply

Your email address will not be published. Required fields are marked *

You May Also Like

ಗದಗ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮುತ್ತುರಾಜ್ ಶಿರಹಟ್ಟಿ ಹಾಗೂ ಮಹಮ್ಮದ್ ಹುಜೇರ್

ಉತ್ತರಪ್ರಭಗದಗ: ಇಂದು ಜಿಲ್ಲೆಯಾದ್ಯಂತ ಶಟಲ ಬ್ಯಾಡ್ಮಿಂಟನ್ ಸ್ಪರ್ಧೆಯು ಕೆ.ಎಚ್.ಪಾಟೀಲ್ ಒಳಾಂಗಣ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿತ್ತು ಶಟಲ್ ಬ್ಯಾಡ್ಮಿಂಟನ…

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.

ಸಿನಿಮಾದಲ್ಲಿ ಮೂಡಿ ಬರಲಿದೆ ಮುರಳೀಧರನ್ ಜೀವನ!

ವಿಶ್ವ ಬ್ಯಾಟಿಂಗ್ ದಿಗ್ಗಜರ ನಿದ್ದೆಗೆಡಿಸಿದ್ದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ತಮಿಳು ನಟ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಹರ್ಭಜನ್ ಸಿಂಗ್ ವಿರುದ್ಧ ಚೆನ್ನೈ ಅಭಿಮಾನಿಗಳೇಕೆ ಕಿಡಿ ಕಾರುತ್ತಿದ್ದಾರೆ?

ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.