ಚೆನ್ನೈ : ಆನ್ ಲೈನ್ ಜೂಜಾಟದಿಂದಾಗಿ ಸದ್ಯ ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾಂಬ್ಲಿಂಗ್ ಅನ್ನು ಉತ್ತೇಜಿಸುತ್ತಿರುವ ಜಾಹಿರಾತುಗಳಲ್ಲಿ ನಟಿಸಿರುವ ಸೆಲೆಬ್ರಿಟಿಗಳಿಗೆ ನೊಟೀಸ್ ನೀಡಲಾಗಿದೆ.  

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್  ತಂಡದ ನಾಯಕ ವಿರಾಟ್ ಕೊಹ್ಲಿ, ನಟ ಪ್ರಕಾಶ್ ರಾಜ್, ರಾಣಾ ಮತ್ತು ತಮನ್ನಾ ಭಾಟಿಯಾಗೆ ಮದ್ರಾಸ್ ಹೈಕೋರ್ಟ್ ನೊಟೀಸ್ ನೀಡಿದೆ.

ಅಲ್ಲದೇ, ನ. 19ರೊಳಗೆ ಉತ್ತರಿಸುವಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಜೂಜಾಟದಿಂದಾಗಿ ಸಾಲ ಹೆಚ್ಚಾಗಿ 9 ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚೆನ್ನೈ ಮೂಲದ ವ್ಯಕ್ತಿ, ಆನ್‌ ಲೈನ್‌ ಜೂಜಾಟದಿಂದ ಯುವಕರು ದಾರಿ ತಪ್ಪುತ್ತಿದ್ದಾರೆ. ಈ ಕಾರಣದಿಂದ ಇಂತಹ ಆಪ್‌ಗಳನ್ನು ರದ್ದು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.

ಯುವಕರನ್ನು ಮನಸ್ಸನ್ನು ಆನ್‌ ಲೈನ್‌ ಜೂಜಾಟಕ್ಕೆ ಸೆಳೆಯಲು ಕ್ರಿಕೆಟ್ ಖ್ಯಾತನಾಮ ಹಾಗೂ ನಟ, ನಟಿಯರು ಬಳಕೆಯಾಗುತ್ತಿದ್ದಾರೆ ಎಂದು ಹೇಳಿದ್ದರು. 

Leave a Reply

Your email address will not be published. Required fields are marked *

You May Also Like

ಫೆ. 12 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ

ಮುಳಗುಂದ ಸಮೀಪದ ಹೊಸೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಯಂಗ್ ಸ್ಟಾರ್ ವತಿಯಿಂದ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗಳನ್ನ ಇದೇ ಫೆ. 12 ರಂದು ಮಹಾಂತೇಶಗೌಡ ಗೌಡರ ಅವರ ಹೊಲದಲ್ಲಿ ಸಿದ್ದಗೊಳಿಸಿದ ಮೈದಾನದಲ್ಲಿ ಏರ್ಪಡಿಸಲಾಗಿದೆ. ಎಂದು ಸಮಿತಿ ಸದಸ್ಯ ಬಸವರಾಜ ಬಂಡಿವಡ್ಡರ ತಿಳಿಸಿದರು.

ಭರ್ಜರಿ ಫಾರ್ಮ್ ಗೆ ಮರಳಿದ ತಂಡದ ಸ್ಟಾರ್ ಆಟಗಾರರಿಗೆ ಗಿಫ್ಟ್ ನೀಡಿದ ಪ್ರೀತಿ ಜಿಂಟಾ!

ದುಬೈ : ಪ್ರಾರಂಭದಲ್ಲಿ ಸೋಲಿನಿಂದ ಕಂಗೆಟ್ಟಿದ್ದ ಪಂಜಾಬ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ಗೆ ಮರಳಿದೆ. ಅಲ್ಲದೇ, ಕಳೆದ ಮೂರು ಪಂದ್ಯಗಳನ್ನು ಗೆದ್ದು ಬೀಗಿದೆ. ಹೀಗಾಗಿ ತಂಡದ ಮಾಲಕರಾದ ಪ್ರೀತಿ ಜಿಂಟಾ ಅವರು ತಂಡದ ನಾಯಕ ಹಾಗೂ ಗೇಲ್ ಗೆ ಉಡುಗೊರೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ಅನುಷ್ಕಾಗೆ ವಿಚ್ಛೇದನ ಕೊಡಬೇಕು ಎಂದವರಾರು? ಏಕೆ?

ಮುಂಬಯಿ: ಬಾಲಿವುಡ್ ಮತ್ತು ಕ್ರಿಕೆಟ್ ನಂಟು ತೀರಾ ಹಳೆಯದು. ಅದಕ್ಕೆ ಇತ್ತೀಚೆಗೆ ಮತ್ತೊಂದು ಕೊಂಡಿ ಬೆಸೆದವರು…

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…