ಅಬುಧಾಬಿ : ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೊನೆಯ ಹಂತದಲ್ಲಿ ವೈಫಲ್ಯ ಅನುಭವಿಸಿತು. ಆದರೂ ಪ್ಲೇ ಆಫ್ ಹಂತ ತಲುಪಿದೆ. ಹೀಗಾಗಿ ಸದ್ಯ ಆರ್ ಸಿಬಿ ಕಪ್ ಗೆಲ್ಲುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಈ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾನ್, ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಗೆಲ್ಲುತ್ತದೆ ಎಂದು ಭಾವಿಸಬೇಡಿ ಎಂದು ಹೇಳಿದ್ದಾರೆ. ದೆಹಲಿ ತಂಡದ ವಿರುದ್ಧ ಆರ್ ಸಿಬಿ ತಂಡ ಹೀನಾಯವಾಗಿ ಸೋತಿದೆ. ಕಪ್ ಗೆಲ್ಲುವ ನೆಚ್ಚಿನ ತಂಡದಲ್ಲಿಯೂ ಆರ್ ಸಿಬಿ ಇದೆ. ಆದರೆ, ಮೈಕಲ್ ವಾನ್ ಅವರು ಮಾತ್ರ ಈ ಬಾರಿ ಆರ್ ಸಿಬಿ ಕಪ್ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ.

ನಾನು ಆರಂಭದಿಂದಲೂ ಹೇಳುತ್ತಿದ್ದೇನೆ ಬೆಂಗಳೂರು ತಂಡ ಈ ಬಾರಿ ಕಪ್ ಗೆಲ್ಲುವುದು ಅನುಮಾನ. ಟೂರ್ನಿಯುದ್ದಕ್ಕೂ ಆರ್‌ ಸಿಬಿ ಕಪ್ ಗೆಲ್ಲುವ ರೀತಿಯ ಪದರ್ಶನ ತೋರಿಲ್ಲ. ವಿರಾಟ್ ಕೊಹ್ಲಿಯವರು ಎಡಗೈನಲ್ಲಿ ಬ್ಯಾಟ್ ಮಾಡಿ ತಂಡವನ್ನು ಗೆಲ್ಲಿಸಬಹುದು. ಆದರೆ, ಅದು ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ.

ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ ಆರ್ ಸಿಬಿ, ಕೊನೆಯ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದರೂ ಆಡಿದ 14 ಪಂದ್ಯದಲ್ಲಿ 7 ಪಂದ್ಯಗಳನ್ನು ಗೆದ್ದು ನೆಟ್ ರನ್ ರೇಟ್ ಆಧಾರದ ಮೇಲೆ ಪ್ಲೇ ಆಫ್ ಗೆ ಆಯ್ಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು?

ಉತ್ತರಪ್ರಭ ಸುದ್ದಿನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ…

ಬೆಂಗಳೂರು ಗಲಭೆ ಪ್ರಕರಣ – ಮಾಜಿ ಮೇಯರ್ ಪತ್ತೆಗಾಗಿ ವಿಶೇಷ ತಂಡ ರಚನೆ!

ಬೆಂಗಳೂರು : ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆಯ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಅವರ ಪತ್ತೆಗಾಗಿ ಸಿಸಿಬಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..!

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..…