ಹಾಸನ : ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿರುವ ಪೊಲೀಸರು ಬಂಧಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೂವರು ಯುವಕರ ಮೇಲೆ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಸುನೀಲ್, ಗ್ರಾಮಾಂತರ ಪಿಎಸ್ ಐ ಸುರೇಶ್‍ ಎಂಬುವವರಿಗೆ ಚೂರಿ ಇರಿದಿದ್ದಾನೆ.

ಈ ಸಂದರ್ಭದಲ್ಲಿ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಫೈರಿಂಗ್ ಸಂದರ್ಭದಲ್ಲಿ ಆರೋಪಿತ ಹಾಗೂ ಆತನ ಸಹಚರರು ದಾಳಿ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಸುನೀಲ್ ಮೇಲೆ ಗುಂಡು ಹಾರಿಸಿದ್ದಾರೆ.

ಆರೋಪಿತ ಹಲವು ಗಂಭೀರ ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಹೀಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಗಾಯಗೊಂಡಿರುವ ಪಿಎಸ್ ಐ ಹಾಗೂ ಗುಂಡೇಟು ಬಿದ್ದ ರೌಡಿ ಶೀಟರ್ ನನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಎಸ್ಪಿವ ಶ್ರೀನಿವಾಸ್ ಗೌಡ ಭೇಟಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಗೃಹ ರಕ್ಷಕ ದಳದ ಸದಸ್ಯ ಸ್ಥಾನಗಳ ನೋಂದಣಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಿಗೆ ಕೆಟಿಟಿಎಫ್ ನೋಂದಣಿ ಕಡ್ಡಾಯ

ಉತ್ತರಪ್ರಭ ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಕಾಯ್ದೆ-2015 ಜಾರಿಯಲ್ಲಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ…

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ

ಲಕ್ಷ್ಮೇಶ್ವರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ…