ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ರಾಜ್ಯದಲ್ಲಿ ಶಾಲೆಗಳು ಮುಚ್ಚಿವೆ. ಆದರೆ, ಸದ್ಯ ಕೊರೊನಾ ತಗ್ಗುತ್ತಿದ್ದು, ಶಾಲೆಗಳನ್ನು ತೆರೆಯುವ ಕುರಿತು ಚಿಂತನೆ ನಡೆಯುತ್ತಿದೆ.

ಶಾಲೆಗಳನ್ನು ಪ್ರಾರಂಭಿಸುವುದಕ್ಕಾಗಿ ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ನ. 4ರಿಂದ 6ರ ವರೆಗೆ ಸಭೆ ನಡೆಸಲಿದ್ದು, 6 ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಶಾಲೆಗಳ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. ಅಲ್ಲದೇ, ಇವುಗಳೊಂದಿಗೆ ಶಾಲಾ ಕಟ್ಟಡ ಹಾಗೂ ಕೋಣೆಗಳ ದುರಸ್ತಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸಿದ್ಧತೆಗಳ ಕುರಿತು ಕೂಡ ಚರ್ಚೆ ನಡೆಯಲಿದೆ. 

ಈಗಾಗಲೇ ಆಂಧ್ರಪ್ರದೇಶದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿಯೇ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನವೆಂಬರ್ ಕೊನೆಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ಹಂತ–ಹಂತವಾಗಿ ಶಾಲೆಗಳನ್ನು ಆರಂಭಿಸುವ ಚಿಂತನೆ ಇದೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

You May Also Like

ದಲಿತ ವಿಮೋಚನಾ ಸೇನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪೂಜಾ

ನಿಡಗುಂದಿ; ದಲಿತ ವಿಮೋಚನಾ ಸೇನೆಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆಯಾಗಿ ಪಟ್ಟಣದ ಪೂಜಾ ಪೀರಪ್ಪ ದೊಡಮನಿ…

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು 14…

ವಿಜಯ ನಗರ ಶುಗರ್ಸ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೊಲೆ!

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…