ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಲ್ಲಿಯ ಬನಶಂಕರಿ ನಗರದಲ್ಲಿರುವ ಬನಶಂಕರಿ ದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚುನಾವಣೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಪೋಸ್ಟ್ ಹಾಕಿದ್ದ ಡಿಕೆಶಿ, ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ಎಲ್ಲ ಮತದಾರರಿಗೂ ಧನ್ಯವಾದಗಳು ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ತಮ್ಮ ಕಾರ್ಯಕರ್ತರಿಗೂ ಧನ್ಯವಾದಗಳನ್ನು ಡಿಕೆಶಿ ಅರ್ಪಿಸಿದ್ದರು.

ಡಿಕೆಶಿ ಅವರು ಕೆಪಿಸಿಸಿ ಸಾರಥ್ಯ ವಹಿಸಿಕೊಂಡ ನಂತರ, ಅವರು ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದಾರೆ. ಹೀಗಾಗಿ ಅವರಿಗೆ ಈ ಎರಡೂ ಕ್ಷೇತ್ರಗಳ ಚುನಾವಣೆ ಪ್ರತಿಷ್ಠೆಯಿಂದ ಕೂಡಿದೆ. ಈಗಾಗಲೇ ಶಿರಾದಲ್ಲಿ 84.54ರಷ್ಟು ಹಾಗೂ ರಾಜರಾಜೇಶ್ವರಿ ನಗರದಲ್ಲಿ 45.24ರಷ್ಟು ಮತದಾನವಾಗಿದೆ. ನ. 10ರಂದು ಫಲಿತಾಂಶ ಹೊರ ಬೀಳಲಿದೆ.

Leave a Reply

Your email address will not be published. Required fields are marked *

You May Also Like

ಎಂಇಎಸ್ ಗೆ ಖಡಕ್ ವಾರ್ನಿಂಗ್…ಬೆಳಗಾವಿಯಲ್ಲಿ ಹೈ ಅಲರ್ಟ್!

ಬೆಳಗಾವಿ : ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

“ತಿಳಿಗೊಳ”ಅಭಿನಂದನ ಗ್ರಂಥದ ಲೋಕಾರ್ಪಣೆ ಹಾಗೂ ಗುರುವಂದನ ಕಾರ್ಯಕ್ರಮ”

ಉತ್ತರಪ್ರಭ ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು,…

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.