ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವೈರಸ್ ಗೆ ಸುಮಾರು 2 ಕೋಟಿ ಜನರಿಗೆ ತಗುಲಿದೆ ಎಂದು ಸರ್ಕಾರ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ. 

ರಾಜ್ಯದಲ್ಲಿ ಸೆ. 16ರವರೆಗೆ ಕನಿಷ್ಠ 1.93 ಕೋಟಿ ಅಥವಾ ಶೇ. 27.3ರಷ್ಟು ಜನರಿಗೆ ಸೋಂಕು ತಗುಲಿದೆ ಎಂದು ಸರ್ಕಾರ ಈ ಅಂಕಿ – ಅಂಶವನ್ನು ಬಹಿರಂಗ ಪಡಿಸಿದೆ. 

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಮಾತನಾಡಿ, ಈ ಸರ್ವೆ 2020ರ ಸೆ. 3 ರಿಂದ 16 ರವರೆಗೆ ನಡೆದಿದೆ. ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ.

ರಾಜ್ಯದಲ್ಲಿ ಮರಣ ಪ್ರಮಾಣ ಶೇ. 0.05 ಇದೆ. ಮುಂಬಯಿನಲ್ಲಿ ಶೇ. 0.05 ರಿಂದ ಶೇ. 0.10, ಪುಣೆಯಲ್ಲಿ ಶೇ. 0.08, ದೆಹಲಿಯಲ್ಲಿ ಶೇ. 0.09, ಚೆನ್ನೈನಲ್ಲಿ ಶೇ. 0.13ರಷ್ಟು ಮರಣ ಪ್ರಮಾಣವಿದೆ ಎಂದು ಹೇಳಿದ್ದಾರೆ. ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ಕೂಡ ಅವರು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ವಾರದ ಹಿಂದಷ್ಟೆ ಹೊಗಳಿದ ಅಮೇರಿಕಾ ಪ್ರಧಾನಿ ಮೋದಿ ಅಕೌಂಟ್ ಅನ್ ಫಾಲೋ ಮಾಡಿದ್ದೇಕೆ?

ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ ಇದಕ್ಕೆ ಕಾರಣವೇನು ಎನ್ನುವುದು ಮಾತ್ರ ನಿಗೂಢವಾಗಿದೆ.

ಪೆಟ್ರೋಲ್ – ಡಿಸೇಲ್ ದರ ದುಬಾರಿಯಾಗಿದ್ದರ ಮಧ್ಯೆಯೂ ಈ ರಾಜ್ಯಗಳ ಜನತೆಗೆ ʼಬಿಗ್ ರಿಲೀಫ್ʼ

ದೇಶದಲ್ಲಿ ಏರುತ್ತಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕುತ್ತಲೇ ಇದೆ. ಕೆಲವು ರಾಜ್ಯಗಳಲ್ಲಂತೂ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 100ರ ಗಡಿ ದಾಟಿದೆ. ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನ ದೂಷಿಸುತ್ತಲೇ ಇದೆ.

ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ನವದೆಹಲಿ : ಕೇಂದ್ರ ಸರ್ಕಾರದ ಸೂಚನೆಯಂತೆ ಜೂ. 8ರಿಂದ ಎಲ್ಲ ಧಾರ್ಮಿಕ ಕೇಂದ್ರಗಳು ಮರಳಿ ಓಪನ್…

ನೇಪಾಳದೊಂದಿಗೆ ನಮ್ಮದು ಗಟ್ಟಿ ಸಂಬಂಧ: ಹೈರಾಣಾಗಿರುವ ಭಾರತಕ್ಕೆ ಇದು ಇನ್ನಷ್ಟು ಮುಜುಗರ

ದೆಹಲಿ: ನೇಪಾಳದೊಂದಿಗೆ ನಮ್ಮ ಸಂಬಂಧ ಬಲಿಷ್ಠವಾಗಿದೆ ಎಂದು ಭಾರತೀಯ ಸೇನಾ ಮುಖಸ್ಥ ಎಂ.ಎಂ.ನರವಣೆ ಹೇಳಿದ್ದಾರೆ. ನಾವು…